ಈ ಸಂಬಂಧ ಹೈಕೋರ್ಟ್ ಆದೇಶ ನೀಡಿ ಮೂರು ವರ್ಷಗಳು ಕಳೆದಿವೆ. ಆದರೂ, ಸ್ವಾಧೀನಕ್ಕೆ ನೀಡದ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ಅಂಗವಿಕಲರಾದ ಅರ್ಜುನ್ ಸಾ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಗೆ ಖುದ್ದು ಹಾಜರಾಗುವಂತೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿತ್ತು. ಅದರಂತೆ ಗೌರವ್ ಗುಪ್ತ ವಿಚಾರಣೆಗೆ ಹಾಜರಾಗಿದ್ದರು.