ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಪಣತ್ತೂರು, ಹೂಡಿ, ದೊಡ್ಡನೆಕ್ಕುಂದಿ, ವರ್ತೂರು, ಕುಂದನಹಳ್ಳಿ, ಮುನ್ನೇಕೊಳಲು, ಕಸವನಹಳ್ಳಿ ಪ್ರದೇಶಗಳಲ್ಲಿ 5 ಸಾವಿರ ಮೀಟರ್ನಷ್ಟು ರಾಜಕಾಲುವೆ ಒತ್ತುವರಿಯಾಗಿದೆ. ಭೂಮಾಪಕರು ಸರ್ವೆ ನಡೆಸಿ ಒತ್ತುವರಿ ಗುರುತು ಮಾಡಿದ್ದಾರೆ. ಕೂಡಲೇ ತೆರವು ಮಾಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ವಲಯ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ವಿವರಿಸಿದ್ದಾರೆ.