ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. ಬಿಬಿಎಂಪಿ ಕಾಯ್ದೆಯು ಸೋಮವಾರದಿಂದ ಜಾರಿಗೆ ಬಂದಿದೆ. ಈ ಕಾಯ್ದೆ ಜಾರಿಗೆ ಅಗತ್ಯವಿರುವ ನಿಯಮಗಳು, ಬೈಲಾಗಳು, ಬಿಬಿಎಂಪಿ ಹುದ್ದೆಗಳ ಪುನರ್ ನಾಮಕರಣ ಹಾಗೂ ವಲಯಗಳ ಪುನರ್ವಿಂಗಡಣೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.