ಮೊದಲಿಗೆ ಕೆಂಪೇಗೌಡ ರಸ್ತೆಯ ಇಂದಿರಾ ಕ್ಯಾಂಟೀನ್ (ಬನ್ನಪ್ಪ ಉದ್ಯಾನ) ಬಳಿ ರಸ್ತೆ, ಶಿವಾನಂದ ವೃತ್ತದಿಂದ ಕುಮಾರಕೃಪ ರಸ್ತೆ, ಎಂ.ಜಿ.ರಸ್ತೆಗಳಲ್ಲಿ ಕಸ ಗುಡಿಸುವ ಯಂತ್ರದ ಕಾರ್ಯವೈಖರಿ ಪರಿಶೀಲಿಸಿ, ‘ಎಲ್ಲಿಯೂ ಕಸ ಉಳಿಯದಂತೆ ನೋಡಿಕೊಳ್ಳಬೇಕು. ರಸ್ತೆ ವಿಭಜಕಗಳ ಮೇಲೆ ಕಸ ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು’ ಎಂದು ಸೂಚನೆ ನೀಡಿದರು.