ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಎಂ.ಜವಾದ್, ‘ಹೊರಾಂಗಣ ಜಾಹೀರಾತು ಸಂಸ್ಥೆಗಳು ಕಾನೂನು ಬದ್ಧ ಜಾಹೀರಾತುಗಳನ್ನು ಮಾತ್ರ ಪ್ರದರ್ಶಿಸುತ್ತದೆ. ಈ ನಿಯಮಗಳಿಂದ ನಗರದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನುವುದು ತಪ್ಪು ಕಲ್ಪನೆ. ಇವು, ಆರ್ಥಿಕ ಸಂಕಷ್ಟದ ಸಮಯದಲ್ಲಿ ಆದಾಯ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ದೂರದೃಷ್ಟಿಯ ನಿಯಮಗಳು’ ಎಂದರು.