<p><strong>ಬೆಂಗಳೂರು: </strong>ಶಿವಾಜಿನಗರದಲ್ಲಿರುವ ಹಫಿಜಿಯಾ ಶಾಲೆಯನ್ನು ₹12 ಕೋಟಿ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಗೆ ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಚಾಲನೆ ನೀಡಿದರು.</p>.<p>‘ಬಿಬಿಎಂಪಿಯು ಹಫಿಜಿಯಾ ಶಾಲೆ ನವೀಕರಿಸುವುದರಿಂದ ಮತ್ತು ನೂತನ ಕಟ್ಟಡ ನಿರ್ಮಿಸುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಶಾಲೆಗೆ 100ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ಶಾಲೆಯನ್ನು ಬೆಂಗಳೂರಿನ ಸರ್ಕಾರಿ ಶಾಲೆಗಳ ಪೈಕಿ ಮೊದಲನೇ ಸ್ಥಾನದಲ್ಲಿ ನಿಲ್ಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.</p>.<p>‘ಬಿಬಿಎಂಪಿ ವತಿಯಿಂದ ನಿರ್ಮಿಸುವ ಶಾಲಾ ಕಟ್ಟಡದ ನೀಲನಕ್ಷೆ ನೋಡಿದಾಗಲೇ ಇದು ಅಂತರರಾಷ್ಟ್ರೀಯ ಗುಣಮಟ್ಟದ್ದು ಎಂಬುದು ಮನದಟ್ಟಾಗುತ್ತದೆ. ಎಜುಕೇಷನ್ ಡಿಸೈನ್ ಇಂಟರ್ನ್ಯಾಷನಲ್ ಸಂಸ್ಥೆಯು ಶಾಲಾ ಕಟ್ಟಡದ ವಿನ್ಯಾಸ ಸಿದ್ಧಪಡಿಸಿದ್ದಾರೆ. ಇದಕ್ಕೆ ಯಾವುದೇ ಹಣ ಪಡೆದಿಲ್ಲ’ ಎಂದು ಹೇಳಿದರು.</p>.<p>ಗೌರವ್ ಗುಪ್ತ,‘ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 9ರಿಂದ 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದರು.</p>.<p>ವಲಯ ಆಯುಕ್ತ ಮನೋಜ್ ಜೈನ್, ವಲಯದ ಜಂಟಿ ಆಯುಕ್ತರಾದ ಪಲ್ಲವಿ, ಕಾರ್ಯನಿರ್ವಾಹಕ ಎಂಜಿನಿಯರ್ ಸೈಫುದ್ದೀನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿವಾಜಿನಗರದಲ್ಲಿರುವ ಹಫಿಜಿಯಾ ಶಾಲೆಯನ್ನು ₹12 ಕೋಟಿ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಗೆ ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಚಾಲನೆ ನೀಡಿದರು.</p>.<p>‘ಬಿಬಿಎಂಪಿಯು ಹಫಿಜಿಯಾ ಶಾಲೆ ನವೀಕರಿಸುವುದರಿಂದ ಮತ್ತು ನೂತನ ಕಟ್ಟಡ ನಿರ್ಮಿಸುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಶಾಲೆಗೆ 100ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ಶಾಲೆಯನ್ನು ಬೆಂಗಳೂರಿನ ಸರ್ಕಾರಿ ಶಾಲೆಗಳ ಪೈಕಿ ಮೊದಲನೇ ಸ್ಥಾನದಲ್ಲಿ ನಿಲ್ಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.</p>.<p>‘ಬಿಬಿಎಂಪಿ ವತಿಯಿಂದ ನಿರ್ಮಿಸುವ ಶಾಲಾ ಕಟ್ಟಡದ ನೀಲನಕ್ಷೆ ನೋಡಿದಾಗಲೇ ಇದು ಅಂತರರಾಷ್ಟ್ರೀಯ ಗುಣಮಟ್ಟದ್ದು ಎಂಬುದು ಮನದಟ್ಟಾಗುತ್ತದೆ. ಎಜುಕೇಷನ್ ಡಿಸೈನ್ ಇಂಟರ್ನ್ಯಾಷನಲ್ ಸಂಸ್ಥೆಯು ಶಾಲಾ ಕಟ್ಟಡದ ವಿನ್ಯಾಸ ಸಿದ್ಧಪಡಿಸಿದ್ದಾರೆ. ಇದಕ್ಕೆ ಯಾವುದೇ ಹಣ ಪಡೆದಿಲ್ಲ’ ಎಂದು ಹೇಳಿದರು.</p>.<p>ಗೌರವ್ ಗುಪ್ತ,‘ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 9ರಿಂದ 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದರು.</p>.<p>ವಲಯ ಆಯುಕ್ತ ಮನೋಜ್ ಜೈನ್, ವಲಯದ ಜಂಟಿ ಆಯುಕ್ತರಾದ ಪಲ್ಲವಿ, ಕಾರ್ಯನಿರ್ವಾಹಕ ಎಂಜಿನಿಯರ್ ಸೈಫುದ್ದೀನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>