ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ಗೆ ಮುಖ್ಯಮಂತ್ರಿ ತಡೆ ನೀಡಿಲ್ಲ. ಹೆಚ್ಚುವರಿಯಾಗಿ ಬಜೆಟ್ ಸಿದ್ಧಪಡಿಸಿದ್ದರಿಂದ ತಡೆ ನೀಡಲಾಗಿದೆ ಎಂದು ಶಾಸಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಮೊದಲಿಗೆ 9 ಸಾವಿರ ಕೋಟಿ ಮೊತ್ತದ ಬಜೆಟ್ ರೂಪಿಸಿದ್ದು, ನಂತರ ಅದನ್ನು 13 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಬಜೆಟ್ಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಬುಧವಾರ ಬೆಂಗಳೂರು ಅಭಿವೃದ್ಧಿ ಕುರಿತು ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ತಡೆ ನೀಡಿಲ್ಲ. ಗುಣಮಟ್ಟ ಇಲ್ಲದ ಮತ್ತುಕಳಪೆ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಮೈತ್ರಿ ಸರ್ಕಾರದ ಕೊನೆ ದಿನಗಳಲ್ಲಿ ಅನುಮೋದನೆ ನೀಡಿದ ಯೋಜನೆಗಳಿಗೆ ತಡೆ ನೀಡಲಾಗಿದೆ ಎಂದು ಹೇಳಿದರು.