ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಬಜೆಟ್ ತಡೆದಿಲ್ಲ: ಅಶೋಕ್

Last Updated 14 ಆಗಸ್ಟ್ 2019, 19:39 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‌ಗೆ ಮುಖ್ಯಮಂತ್ರಿ ತಡೆ ನೀಡಿಲ್ಲ. ಹೆಚ್ಚುವರಿಯಾಗಿ ಬಜೆಟ್ ಸಿದ್ಧಪಡಿಸಿದ್ದರಿಂದ ತಡೆ ನೀಡಲಾಗಿದೆ ಎಂದು ಶಾಸಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಮೊದಲಿಗೆ 9 ಸಾವಿರ ಕೋಟಿ ಮೊತ್ತದ ಬಜೆಟ್ ರೂಪಿಸಿದ್ದು, ನಂತರ ಅದನ್ನು 13 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಬಜೆಟ್‌ಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಬುಧವಾರ ಬೆಂಗಳೂರು ಅಭಿವೃದ್ಧಿ ಕುರಿತು ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ತಡೆ ನೀಡಿಲ್ಲ. ಗುಣಮಟ್ಟ ಇಲ್ಲದ ಮತ್ತುಕಳಪೆ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಮೈತ್ರಿ ಸರ್ಕಾರದ ಕೊನೆ ದಿನಗಳಲ್ಲಿ ಅನುಮೋದನೆ ನೀಡಿದ ಯೋಜನೆಗಳಿಗೆ ತಡೆ ನೀಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT