<p><strong>ಬೆಂಗಳೂರು:</strong> ನಗರದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸುವ ಸಂಬಂಧ ವಿಧಾನಗಳನ್ನು ರೂಪಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೈಕೋರ್ಟ್ಗೆ ಬಿಬಿಎಂಪಿ ಮತ್ತು ಬೆಸ್ಕಾಂ ಮಾಹಿತಿ ನೀಡಿವೆ.</p>.<p>ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ರಾಜೇಶಗೌಡ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಪ್ರಮಾಣಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ಉಪಕರಣ ಅಥವಾ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲು ಅನುಕೂಲಕರ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಸಮಿತಿ ರಚಿಸಲಾಗುತ್ತಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.</p>.<p>ಜನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸುಮಾರು 800 ಟ್ರಾನ್ಸ್ಫಾರ್ಮರ್ಗಳನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗುತ್ತಿರುವ ಅನಾನುಕೂಲ ತಪ್ಪಿಸಲು ಸಮಾಲೋಚನೆ ಪ್ರಕ್ರಿಯೆ ಕೂಡಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.</p>.<p>ಈ ಪ್ರಕ್ರಿಯೆಗೆ ಸಮಯಾವಕಾಶ ನೀಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಎರಡು ಪ್ರಾಧಿಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಶೀಲನೆಗೆ ಸೂಕ್ತ ಏಜೆನ್ಸಿ ನೇಮಿಸಲಾಗುವುದು ಎಂದು ತಿಳಿಸಿತು.</p>.<p>ಪಾದಚಾರಿ ಮಾರ್ಗಗಳಲ್ಲಿ ಇರುವ ಅಪಾಯಕಾರಿ ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸಲು ನಿರ್ದೇಶನ ನೀಡಲು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸುವ ಸಂಬಂಧ ವಿಧಾನಗಳನ್ನು ರೂಪಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೈಕೋರ್ಟ್ಗೆ ಬಿಬಿಎಂಪಿ ಮತ್ತು ಬೆಸ್ಕಾಂ ಮಾಹಿತಿ ನೀಡಿವೆ.</p>.<p>ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ರಾಜೇಶಗೌಡ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಪ್ರಮಾಣಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ಉಪಕರಣ ಅಥವಾ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲು ಅನುಕೂಲಕರ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಸಮಿತಿ ರಚಿಸಲಾಗುತ್ತಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.</p>.<p>ಜನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸುಮಾರು 800 ಟ್ರಾನ್ಸ್ಫಾರ್ಮರ್ಗಳನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗುತ್ತಿರುವ ಅನಾನುಕೂಲ ತಪ್ಪಿಸಲು ಸಮಾಲೋಚನೆ ಪ್ರಕ್ರಿಯೆ ಕೂಡಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.</p>.<p>ಈ ಪ್ರಕ್ರಿಯೆಗೆ ಸಮಯಾವಕಾಶ ನೀಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಎರಡು ಪ್ರಾಧಿಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಶೀಲನೆಗೆ ಸೂಕ್ತ ಏಜೆನ್ಸಿ ನೇಮಿಸಲಾಗುವುದು ಎಂದು ತಿಳಿಸಿತು.</p>.<p>ಪಾದಚಾರಿ ಮಾರ್ಗಗಳಲ್ಲಿ ಇರುವ ಅಪಾಯಕಾರಿ ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸಲು ನಿರ್ದೇಶನ ನೀಡಲು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>