<p><strong>ಬೆಂಗಳೂರು</strong>: ಸಂಚಾರ ದಟ್ಟಣೆ ಹೆಚ್ಚಿರುವ ಪ್ರಮುಖ ಜಂಕ್ಷನ್ಗಳಲ್ಲಿ ಸುಗಮ ಸಂಚಾರಕ್ಕೆ ಇರುವ ಮಾರ್ಗೋಪಾಯಗಳ ಬಗ್ಗೆ ಪರಿಶೀಲನೆ ನಡೆಸಲು ಬಿಬಿಎಂಪಿ, ಬಿಡಿಎ, ಜಲ ಮಂಡಳಿ, ಪೊಲೀಸ್, ಬೆಸ್ಕಾಂ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿ ನಗರ ಸಂಚಾರ ನಡೆಸಿತು.</p>.<p>ಗೊರಗುಂಟೆಪಾಳ್ಯ, ಹೆಬ್ಬಾಳ, ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ಗಳಿಗೆ ತಂಡ ಭೇಟಿ ನೀಡಿತ್ತು. ಮೊದಲಿಗೆ ಗೊರಗುಂಟೆ ಪಾಳ್ಯದಲ್ಲಿ ರಸ್ತೆ ಹಾಳಾಗಿರುವುದು, ಸಾರ್ವಜನಿಕ ಶೌಚಾಲಯ ಇಲ್ಲದಿರುವುದು, ಪಾದಚಾರಿಗಳು ರಸ್ತೆ ದಾಟಲು ಇರುವ ತೊಂದರೆಗಳನ್ನು ಸರಿಪಡಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿತು.</p>.<p>‘ರಸ್ತೆ ದುರಸ್ತಿ, ಶೌಚಾಲಯ, ಪಾದಚಾರಿ ಮೇಲ್ಸೇತುವೆಗಳನ್ನು ತುರ್ತಾಗಿ ನಿರ್ಮಿಸಬೇಕಿದೆ. ಅದಕ್ಕೆ ಬೇಕಿರುವ ಕಾರ್ಯಯೋಜನೆಯನ್ನು ಬುಧವಾರದಿಂದಲೇ ಆರಂಭಿಸಲಾಗುವುದು. ಸಂಚಾರ ದಟ್ಟಣೆ ಸಮಸ್ಯೆ ಸರಿಪಡಿಸಲು ದೀರ್ಘಕಾಲದ ಯೋಜನೆಯನ್ನು ಬಿಡಿಎ ಸಿದ್ಧಪಡಿಸಿದೆ. ಅನುಷ್ಠಾನದ ಸಾಧಕ–ಬಾಧಕಗಳ ಬಗ್ಗೆಯೂ ಪರಿಶೀಲಿಸಲಾಗುವುದು’ ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದರು.</p>.<p>‘ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಸಂಚಾರವನ್ನು ನಗರದೊಳಗೆ ನಿರ್ಬಂಧಿಸಿ ಪೀಣ್ಯ ಬಸ್ ನಿಲ್ದಾಣ ಬಳಿಯೇ ಬಸ್ ನಿಲುಗಡೆ ಮಾಡಿಸುವ ಸಂಬಂಧ ಕೆಎಸ್ಆರ್ಟಿಸಿಗೂ ಮನವಿ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ’ ಎಂದು ತಿಳಿಸಿದರು.</p>.<p>‘ರಸ್ತೆ ದುರಸ್ತಿ ಕಾರ್ಯವನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಪೀಣ್ಯ(ಶಿವಕುಮಾರಸ್ವಾಮಿ) ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೂ ಅವಕಾಶ ದೊರೆತರೆ ಸಂಚಾರ ದಟ್ಟಣೆ ಸಮಸ್ಯೆ ಸುಧಾರಿಸಲಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ನಗರ ಪೊಲೀಸ್ ಕಮಿಷನರ್ ಪ್ರತಾಪರೆಡ್ಡಿ, ಬಿಡಿಎ ಆಯುಕ್ತ ರಾಜೇಶ್ಗೌಡ, ಜಲ ಮಂಡಳಿ ಅಧ್ಯಕ್ಷ ಜಯರಾಮ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ತಂಡದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಂಚಾರ ದಟ್ಟಣೆ ಹೆಚ್ಚಿರುವ ಪ್ರಮುಖ ಜಂಕ್ಷನ್ಗಳಲ್ಲಿ ಸುಗಮ ಸಂಚಾರಕ್ಕೆ ಇರುವ ಮಾರ್ಗೋಪಾಯಗಳ ಬಗ್ಗೆ ಪರಿಶೀಲನೆ ನಡೆಸಲು ಬಿಬಿಎಂಪಿ, ಬಿಡಿಎ, ಜಲ ಮಂಡಳಿ, ಪೊಲೀಸ್, ಬೆಸ್ಕಾಂ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿ ನಗರ ಸಂಚಾರ ನಡೆಸಿತು.</p>.<p>ಗೊರಗುಂಟೆಪಾಳ್ಯ, ಹೆಬ್ಬಾಳ, ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ಗಳಿಗೆ ತಂಡ ಭೇಟಿ ನೀಡಿತ್ತು. ಮೊದಲಿಗೆ ಗೊರಗುಂಟೆ ಪಾಳ್ಯದಲ್ಲಿ ರಸ್ತೆ ಹಾಳಾಗಿರುವುದು, ಸಾರ್ವಜನಿಕ ಶೌಚಾಲಯ ಇಲ್ಲದಿರುವುದು, ಪಾದಚಾರಿಗಳು ರಸ್ತೆ ದಾಟಲು ಇರುವ ತೊಂದರೆಗಳನ್ನು ಸರಿಪಡಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿತು.</p>.<p>‘ರಸ್ತೆ ದುರಸ್ತಿ, ಶೌಚಾಲಯ, ಪಾದಚಾರಿ ಮೇಲ್ಸೇತುವೆಗಳನ್ನು ತುರ್ತಾಗಿ ನಿರ್ಮಿಸಬೇಕಿದೆ. ಅದಕ್ಕೆ ಬೇಕಿರುವ ಕಾರ್ಯಯೋಜನೆಯನ್ನು ಬುಧವಾರದಿಂದಲೇ ಆರಂಭಿಸಲಾಗುವುದು. ಸಂಚಾರ ದಟ್ಟಣೆ ಸಮಸ್ಯೆ ಸರಿಪಡಿಸಲು ದೀರ್ಘಕಾಲದ ಯೋಜನೆಯನ್ನು ಬಿಡಿಎ ಸಿದ್ಧಪಡಿಸಿದೆ. ಅನುಷ್ಠಾನದ ಸಾಧಕ–ಬಾಧಕಗಳ ಬಗ್ಗೆಯೂ ಪರಿಶೀಲಿಸಲಾಗುವುದು’ ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದರು.</p>.<p>‘ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಸಂಚಾರವನ್ನು ನಗರದೊಳಗೆ ನಿರ್ಬಂಧಿಸಿ ಪೀಣ್ಯ ಬಸ್ ನಿಲ್ದಾಣ ಬಳಿಯೇ ಬಸ್ ನಿಲುಗಡೆ ಮಾಡಿಸುವ ಸಂಬಂಧ ಕೆಎಸ್ಆರ್ಟಿಸಿಗೂ ಮನವಿ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ’ ಎಂದು ತಿಳಿಸಿದರು.</p>.<p>‘ರಸ್ತೆ ದುರಸ್ತಿ ಕಾರ್ಯವನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಪೀಣ್ಯ(ಶಿವಕುಮಾರಸ್ವಾಮಿ) ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೂ ಅವಕಾಶ ದೊರೆತರೆ ಸಂಚಾರ ದಟ್ಟಣೆ ಸಮಸ್ಯೆ ಸುಧಾರಿಸಲಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ನಗರ ಪೊಲೀಸ್ ಕಮಿಷನರ್ ಪ್ರತಾಪರೆಡ್ಡಿ, ಬಿಡಿಎ ಆಯುಕ್ತ ರಾಜೇಶ್ಗೌಡ, ಜಲ ಮಂಡಳಿ ಅಧ್ಯಕ್ಷ ಜಯರಾಮ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ತಂಡದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>