<p><strong>ಬೆಂಗಳೂರು:</strong> ‘ಅನ್ಲಾಕ್‘ಗೆ ಎರಡೇ ದಿನ ಬಾಕಿ ಇದ್ದು, ಎಲ್ಲ ಮಾಲ್, ಕೈಗಾರಿಕೆಗಳು ಮತ್ತು ಸಾರ್ವಜನಿಕ ಸಾರಿಗೆ ಆರಂಭಕ್ಕೆ ಅನುಮತಿ ಕೋರಿ ಬಿಬಿಎಂಪಿಯು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಸಂಬಂಧ ಸರ್ಕಾರದ ಮಹತ್ವದ ಸಭೆ ಶನಿವಾರ ನಡೆಯಲಿದೆ.</p>.<p>ಕೈಗಾರಿಕೆಗಳು, ಮಾಲ್ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಸೋಮವಾರದಿಂದ ಪುನರಾರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ತೀರ್ಮಾನವೇ ಅಂತಿಮ ಎಂದೂ ಹೇಳಿದೆ.</p>.<p>‘ಲಾಕ್ಡೌನ್ ನಿರ್ಬಂಧಗಳನ್ನು ಹಂತ–ಹಂತವಾಗಿ ಸಡಿಲಿಸಬೇಕಾಗಿದೆ. ಹಲವು ವಲಯಗಳಲ್ಲಿ ನಿರ್ಬಂಧ ಸಡಿಲಿಸಬಹುದು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಮೂರನೇ ಅಲೆಯ ಸಾಧ್ಯತೆಯೂ ಇದೆ. ನಾವು ಎಚ್ಚರದಿಂದಿರಬೇಕಾದುದು ಅವಶ್ಯಕ. ಆದರೂ, ಆರ್ಥಿಕ ಚಟುವಟಿಕೆಗಳು ಮತ್ತೆ ಚುರುಕಾಗಲು ಕೆಲವು ವಲಯಗಳಲ್ಲಿ ನಿರ್ಬಂಧ ಸಡಿಲಿಕೆ ಅನಿವಾರ್ಯವಾಗಿದೆ’ ಎಂದೂ ಹೇಳಿದರು.</p>.<p>ಈಗಾಗಲೇ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಸೋಮವಾರದಿಂದ ನಿರ್ಬಂಧ ಸಡಿಲಿಕೆಗೆ ಮನವಿ ಮಾಡಲಾಗಿದೆ. ತಜ್ಞರ ಸಲಹಾ ಸಮಿತಿಯು, ಕೆಲವು ಆದ್ಯತಾ ವಲಯಗಳಲ್ಲಿ ಹಂತ–ಹಂತವಾಗಿ ಕೋವಿಡ್ ನಿರ್ಬಂಧ ಸಡಿಲಿಸಬೇಕು ಎಂದೂ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅನ್ಲಾಕ್‘ಗೆ ಎರಡೇ ದಿನ ಬಾಕಿ ಇದ್ದು, ಎಲ್ಲ ಮಾಲ್, ಕೈಗಾರಿಕೆಗಳು ಮತ್ತು ಸಾರ್ವಜನಿಕ ಸಾರಿಗೆ ಆರಂಭಕ್ಕೆ ಅನುಮತಿ ಕೋರಿ ಬಿಬಿಎಂಪಿಯು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಸಂಬಂಧ ಸರ್ಕಾರದ ಮಹತ್ವದ ಸಭೆ ಶನಿವಾರ ನಡೆಯಲಿದೆ.</p>.<p>ಕೈಗಾರಿಕೆಗಳು, ಮಾಲ್ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಸೋಮವಾರದಿಂದ ಪುನರಾರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ತೀರ್ಮಾನವೇ ಅಂತಿಮ ಎಂದೂ ಹೇಳಿದೆ.</p>.<p>‘ಲಾಕ್ಡೌನ್ ನಿರ್ಬಂಧಗಳನ್ನು ಹಂತ–ಹಂತವಾಗಿ ಸಡಿಲಿಸಬೇಕಾಗಿದೆ. ಹಲವು ವಲಯಗಳಲ್ಲಿ ನಿರ್ಬಂಧ ಸಡಿಲಿಸಬಹುದು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಮೂರನೇ ಅಲೆಯ ಸಾಧ್ಯತೆಯೂ ಇದೆ. ನಾವು ಎಚ್ಚರದಿಂದಿರಬೇಕಾದುದು ಅವಶ್ಯಕ. ಆದರೂ, ಆರ್ಥಿಕ ಚಟುವಟಿಕೆಗಳು ಮತ್ತೆ ಚುರುಕಾಗಲು ಕೆಲವು ವಲಯಗಳಲ್ಲಿ ನಿರ್ಬಂಧ ಸಡಿಲಿಕೆ ಅನಿವಾರ್ಯವಾಗಿದೆ’ ಎಂದೂ ಹೇಳಿದರು.</p>.<p>ಈಗಾಗಲೇ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಸೋಮವಾರದಿಂದ ನಿರ್ಬಂಧ ಸಡಿಲಿಕೆಗೆ ಮನವಿ ಮಾಡಲಾಗಿದೆ. ತಜ್ಞರ ಸಲಹಾ ಸಮಿತಿಯು, ಕೆಲವು ಆದ್ಯತಾ ವಲಯಗಳಲ್ಲಿ ಹಂತ–ಹಂತವಾಗಿ ಕೋವಿಡ್ ನಿರ್ಬಂಧ ಸಡಿಲಿಸಬೇಕು ಎಂದೂ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>