ಈ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಪೂರ್ವ ವಲಯದ ಜಂಟಿ ಆಯುಕ್ತರು ಕಳುಹಿಸಿದ್ದರು. ತುರ್ತಾಗಿ ನಾಮಕರಣ ಮಾಡುವುದು ಅವಶ್ಯವಾಗಿರುವುದರಿಂದ, ಬಿಬಿಎಂಪಿ ಕಾಯ್ದೆಯಂತೆ ಅನುಮೋದನೆ ನೀಡಬೇಕೆಂದು ಕೋರಿದ್ದರು. ಮಾರ್ಚ್ 14ರಂದು ಪೂರ್ವ ವಲಯದ ಆಯುಕ್ತರು ಟಿಪ್ಪಣಿಯನ್ನು ಆಡಳಿತಾಧಿಕಾರಿಯವರ ಮುಂದಿರಿಸಿದ್ದರು. ರೇಸ್ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡುವ ಕಾರ್ಯಕ್ರಮ ವಾರದಲ್ಲೇ ನಡೆಯಲಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.