<p><strong>ಬೆಂಗಳೂರು:</strong> ಆಸ್ತಿ ಮಾಲೀಕತ್ವಕ್ಕೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಯು ‘ಸಕಾಲ’ ಯೋಜನೆ ಪ್ರಕಾರ 30 ದಿನಗಳ ಒಳಗೆ ವಿಲೇವಾರಿ ಮಾಡಬೇಕು. ಆದರೆ, ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಯೊಬ್ಬರು ವರ್ಷಾನುಗಟ್ಟಲೆ ಕಡತವನ್ನು ತಮ್ಮ ಬಳಿ ಇರಿಸಿಕೊಂಡಿರುವುದು ಬೆಳಕಿಗೆ ಬಂದಿದೆ.</p>.<p>ಕಡತಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡದ ಕಾರಣಕ್ಕಾಗಿ ಬೊಮ್ಮನಹಳ್ಳಿ ವಲಯದ ಅರಕೆರೆ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ರವಿಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ರವಿ ಕುಮಾರ್ ಅವರು 494 ಕಡತಗಳನ್ನು 2018ರಿಂದಲೂ ಬಾಕಿ ಇರಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಪೈಕಿ 477 ಕಡತಗಳು ಖಾತಾ ವರ್ಗಾವಣೆಗೆ ಸಂಬಂಧಿಸಿದವು. ಇನ್ನುಳಿದ ಒಂಬತ್ತು ಕಡತಗಳು ಖಾತಾ ನೋಂದಣಿಗೆ, ಏಳು ಕಡತಗಳು ಖಾತಾ ವಿಭಜನೆಗೆ ಹಾಗೂ ಒಂದು ಕಡತ ಖಾತಾ ಜೋಡಣೆ ಕುರಿತಾದವು. ಕಡತ ವಿಲೇವಾರಿ ಮಾಡಲು ಲಂಚ ಕೇಳುತ್ತಾರೆ ಎಂಬ ಆರೋಪ ರವಿಕುಮಾರ್ ಮೇಲಿದೆ.</p>.<p>‘ಎಆರ್ಒ ರವಿಕುಮಾರ್ ಸಕಾಲದಲ್ಲಿ ಕಡತಗಳನ್ನು ಮಾಡದ ಬಗ್ಗೆ ದೂರು ಬಂದಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಸಾಬೀತಾಗಿದೆ. ಹಾಗಾಗಿ ಅವರನ್ನು ಅಮಾನತು ಮಾಡಲು ಕ್ರಮಕೈಗೊಂಡಿದ್ದೇವೆ’ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಸ್ತಿ ಮಾಲೀಕತ್ವಕ್ಕೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಯು ‘ಸಕಾಲ’ ಯೋಜನೆ ಪ್ರಕಾರ 30 ದಿನಗಳ ಒಳಗೆ ವಿಲೇವಾರಿ ಮಾಡಬೇಕು. ಆದರೆ, ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಯೊಬ್ಬರು ವರ್ಷಾನುಗಟ್ಟಲೆ ಕಡತವನ್ನು ತಮ್ಮ ಬಳಿ ಇರಿಸಿಕೊಂಡಿರುವುದು ಬೆಳಕಿಗೆ ಬಂದಿದೆ.</p>.<p>ಕಡತಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡದ ಕಾರಣಕ್ಕಾಗಿ ಬೊಮ್ಮನಹಳ್ಳಿ ವಲಯದ ಅರಕೆರೆ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ರವಿಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ರವಿ ಕುಮಾರ್ ಅವರು 494 ಕಡತಗಳನ್ನು 2018ರಿಂದಲೂ ಬಾಕಿ ಇರಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಪೈಕಿ 477 ಕಡತಗಳು ಖಾತಾ ವರ್ಗಾವಣೆಗೆ ಸಂಬಂಧಿಸಿದವು. ಇನ್ನುಳಿದ ಒಂಬತ್ತು ಕಡತಗಳು ಖಾತಾ ನೋಂದಣಿಗೆ, ಏಳು ಕಡತಗಳು ಖಾತಾ ವಿಭಜನೆಗೆ ಹಾಗೂ ಒಂದು ಕಡತ ಖಾತಾ ಜೋಡಣೆ ಕುರಿತಾದವು. ಕಡತ ವಿಲೇವಾರಿ ಮಾಡಲು ಲಂಚ ಕೇಳುತ್ತಾರೆ ಎಂಬ ಆರೋಪ ರವಿಕುಮಾರ್ ಮೇಲಿದೆ.</p>.<p>‘ಎಆರ್ಒ ರವಿಕುಮಾರ್ ಸಕಾಲದಲ್ಲಿ ಕಡತಗಳನ್ನು ಮಾಡದ ಬಗ್ಗೆ ದೂರು ಬಂದಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಸಾಬೀತಾಗಿದೆ. ಹಾಗಾಗಿ ಅವರನ್ನು ಅಮಾನತು ಮಾಡಲು ಕ್ರಮಕೈಗೊಂಡಿದ್ದೇವೆ’ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>