‘ಜೋಪಡಿಗಳ ತೆರವಿಗೆ ಬಿಬಿಎಂಪಿ ಆದೇಶ ಮಾಡಿಲ್ಲ. ಈ ವೇಳೆ ನಮ್ಮ ಅಧಿಕಾರಿಗಳು ಯಾರೂ ಸ್ಥಳದಲ್ಲಿರಲಿಲ್ಲ. ತೆರವುಗೊಳಿಸುವ ವೇಳೆ ರಕ್ಷಣೆ ಕೋಡಿ ಎಂದು ಎಇಇ ನಾರಾಯಣಸ್ವಾಮಿ ಪೊಲೀಸರಿಗೆ ಪತ್ರ ಬರೆದಿದ್ದು ಸತ್ಯ. ಆದರೆ, ತೆರವಿಗೆ ಅವರು ದಿನಾಂಕ ನಿಗದಿಪಡಿಸಿಲ್ಲ. ಈ ಪ್ರಕರಣದ ಬಗ್ಗೆ ಮಹದೇವಪುರದ ಜಂಟಿ ಆಯುಕ್ತರು ತನಿಖೆ ಮಾಡಿ ವರದಿ ಕೊಡುತ್ತಾರೆ. ಅದನ್ನು ಕೌನ್ಸಿಲ್ ಸಭೆಯಲ್ಲಿ ಮಂಡಿಸುತ್ತೇನೆ’ ಎಂದು ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ತಿಳಿಸಿದರು.