‘ಘನತ್ಯಾಜ್ಯ ನಿರ್ವಹಣಾ ನಿಯಮ–2016 ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕೆಎಸ್ಪಿಸಿಬಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪಾಲಿಕೆಯ ಘನತ್ಯಾಜ್ಯ ವಿಲೇವಾರಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ 2019ರ ಸೆಪ್ಟಂಬರ್ನಲ್ಲೇ ನಿರ್ದೇಶಿಸಿತ್ತು. ಆದರೆ, ಕೆಎಸ್ಪಿಸಿಬಿ ಈತನಕ ನ್ಯಾಯಾಲಯಕ್ಕೆ ಯಾವುದೇ ವರದಿ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಲಾಗಿದೆ. ಅರ್ಜಿದಾರರ ಈ ಜ್ಞಾಪನಾ ಪತ್ರವನ್ನು ದಾಖಲಿಸಿಕೊಂಡಿರುವ ನ್ಯಾಯಪೀಠ, ಇದಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ಬಿಬಿಎಂಪಿ ಹಾಗೂ ಕೆಎಸ್ಪಿಸಿಬಿಗೆ ನಿರ್ದೇಶಿಸಿ ಜೂನ್ 15ಕ್ಕೆ ವಿಚಾರಣೆ ಮುಂದೂಡಿದೆ.