ಬಿಬಿಎಂಪಿ ವ್ಯಾಪ್ತಿಯಲ್ಲಿ ಜೀವವೈವಿಧ್ಯ ಸಂರಕ್ಷಣೆ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೀವ ವೈವಿಧ್ಯ ಸಂರಕ್ಷಣೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜುಲೈ 1ರಿಂದ ಆ.15ರವರೆಗೆ ರಾಜ್ಯದಾದ್ಯಂತ ಅಭಿಯಾನ ನಡೆಯುತ್ತಿದೆ. ಅದರ ಅಂಗವಾಗಿ ಬಿಬಿಎಂಪಿಯ ಎಲ್ಲ ವಾರ್ಡ್ಗಳಲ್ಲಿಯೂ ನಾಗರಿಕರ ಸಹಭಾಗಿತ್ವದೊಂದಿಗೆ ಸಸಿ ನೆಡುವ, ಕೆರೆಗಳ ಸಮೀಕ್ಷೆ ಹಾಗೂ ರಕ್ಷಣಾ ಕಾರ್ಯ ಮತ್ತು ಜೀವವೈವಿಧ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸನ್ಮಾನ ಸೇರಿದಂತೆ ಇನ್ನಿತರೆ ಕಾರ್ಯಚಟುವಟಿಕೆ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದರು.