ಹಿನ್ನೆಲೆ: ವೈಟ್ ಟಾಪಿಂಗ್ ಸೇರಿದಂತೆ ಕೆಲ ಕಾಮಗಾರಿಗಳಲ್ಲಿ ಅಕ್ರಮಗಳು ನಡೆದಿದ್ದು, ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಮುನ್ನ ತರಾತುರಿಯಲ್ಲಿ ಸಾಕಷ್ಟು ಕಾಮಗಾರಿಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದರು. ಅಕ್ರಮದ ಆರೋಪ ಕೇಳಿಬಂದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದು, ಬಜೆಟ್ ಜಾರಿಗೂ ತಡೆ ನೀಡಲಾಗಿತ್ತು. ಈಗ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಒಪ್ಪಿಗೆ ನೀಡಲಾಗಿದೆ.