‘ಗೋವಿಂದರಾಜು ಅವರು ನಡೆಸಿರುವ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ನಿರ್ದಿಷ್ಟ ಯೋಜನೆಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅವರು ಅನ್ಯ ಉದ್ದೇಶಗಳಿಗೆ ಬಿಡುಗಡೆ ಮಾಡಿದ್ದಾರೆ. ಜ್ಯೇಷ್ಠತೆ ಆಧಾರದಲ್ಲೂ ಪಾವತಿ ಮಾಡಿಲ್ಲ. ಹಣ ಬಿಡುಗಡೆಗೆ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ (ಐಎಫ್ಎಂಎಸ್) ತಂತ್ರಾಂಶದ ಬಳಕೆ ಕಡ್ಡಾಯವಾಗಿದ್ದರೂ, ಹಣ ಭರವಸೆ ಪತ್ರಗಳ (ಎಲ್ಎಸಿ) ಆಧಾರದಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ಇದರಿಂದ ಒಂದೇ ಕಾಮಗಾರಿಗೆ ಎರೆಡೆರಡು ಬಾರಿ ಹಣ ಪಾವತಿ ಆಗುವ ಅಪಾಯ ಇದೆ’ ಎಂದು ಆಯುಕ್ತರು ತಿಳಿಸಿದರು.