ಅಂಬೇಡ್ಕರ್ ಪ್ರತಿಮೆಗೆ ಮೇಯರ್ ಎಂ.ಗೌತಮ್ ಕುಮಾರ್ ಹಾಗೂ ಇತರ ಗಣ್ಯರು ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದ ಅಂಗವಾಗಿ ಪೌರಕಾರ್ಮಿಕರಿಗೆ ಸ್ಯಾನಿಟೈಸರ್/ ಔಷಧೀಯ ಸಾಬೂನು, ಎರಡು ಜೊತೆ ಮಾಸ್ಕ್, ಒಂದು ಜೊತೆ ಕೈಗವಸು, ಒಂದು ಜೊತೆ ಶೂಗಳಿರುವ ಸ್ವಚ್ಚತಾ ಕಿಟ್ಗಳನ್ನು ವಿತರಿಸಲಾಯಿತು. ಪೌರಕಾರ್ಮಿಕರು ನೆಲೆಸಿರುವ ಕಾಲೊನಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಯಿತು.