<p><strong>ಬೆಂಗಳೂರು:</strong> ಬಿಬಿಎಂಪಿಯ ದಕ್ಷಿಣ ವಲಯ ವ್ಯಾಪ್ತಿಯ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜಿನ ಪುರುಷರ ವಸತಿನಿಲಯದಲ್ಲಿ ಕೋವಿಡ್ ಆರೈಕೆ ಕೇಂದ್ರ ಮತ್ತು ಚಿಕಿತ್ಸೆ ನಿರ್ಧಾರ ಕೇಂದ್ರವನ್ನು (ಟ್ರಯಾಜಿಂಗ್ ಸೆಂಟರ್) ಸ್ಥಾಪಿಸಲಾಗಿದೆ.</p>.<p>ಈ ಕೇಂದ್ರದಲ್ಲಿ 20 ಹಾಸಿಗೆಗಳಿಗೆ ಆಮ್ಲಜನಕ ಸಾಂದ್ರೀಕರಣ ಸಾಧನಗಳನ್ನು ಒದಗಿಸಲಾಗಿದೆ. ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಈ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಕೇಂದ್ರಕ್ಕೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿರುವ ಬಗ್ಗೆ ವಿಚಾರಿಸಿದರು. ಚಿಕಿತ್ಸೆ ಸರದಿ ನಿರ್ಧರಿಸುವಾಗ ಪಾಲಿಸಬೇಕಾದ ಅಂಶಗಳ ಬಗ್ಗೆ ಸಿಬ್ಬಂದಿಗೆ ಸಲಹೆಗಳನ್ನು ನೀಡಿದರು.</p>.<p>ವಿದ್ಯಾರ್ಥಿ ನಿಯಲದಲ್ಲಿ ಇನ್ನಷ್ಟು ಸ್ಥಳಾವಕಾಶ ಇರುವುದರಿಂದ ಹೆಚ್ಚುವರಿಯಾಗಿ 20 ಸಾಮಾನ್ಯ ಹಾಸಿಗೆಗಳನ್ನು ಅಳವಡಿಸುವಂತೆ ವಲಯದ ಜಂಟಿ ಆಯುಕ್ತ ವೀರಭದ್ರಸ್ವಾಮಿ ಹಾಗೂ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ಅವರಿಗೆ ಸೂಚಿಸಿದರು.</p>.<p>ಶಾಸಕ ರವಿ ಸುಬ್ರಹ್ಮಣ್ಯ, ವಿಶೇಷ ಆಯುಕ್ತರು (ಆರೋಗ್ಯ) ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಜೊತೆಯಲ್ಲಿದ್ದರು.</p>.<p>ವಿಲ್ಸನ್ ಗಾರ್ಡನ್ ಹೆರಿಗೆ ಆಸ್ಪತ್ರೆಯಲ್ಲಿರುವ ಸ್ಥಿರೀಕರಣ ಕೇಂದ್ರ ಹಾಗೂ ಚಿಕಿತ್ಸೆ ನಿರ್ಧಾರ ಕೇಂದ್ರಕ್ಕೂ ಮುಖ್ಯ ಆಯುಕ್ತರು ಭೇಟಿ ನೀಡಿ ಪರಿಶೀಲಿಸಿದರು. ಈ ಕೇಂದ್ರದಲ್ಲಿ ಇದುವರೆಗೆ 47 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಈ ಕೇಂದ್ರದ ಬಗ್ಗೆ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಮಾಹಿತಿ ನೀಡಬೇಕು. ಚಿಕಿತ್ಸೆ ನಿರ್ಧಾರ ಕೇಂದ್ರಗಳಿಂದ ಆಗುವ ಅನುಕೂಲಗಳ ಬಗ್ಗೆಯೂ ಪ್ರಚುರಪಡಿಸಬೇಕು ಎಂದು ಆರೋಗ್ಯ ವೈದ್ಯಾಧಿಕಾರಿಗೆ ಮುಖ್ಯ ಆಯುಕ್ತರು ಸೂಚಿಸಿದರು.</p>.<p><strong>ವಿದ್ಯಾಪೀಠ ಆರೋಗ್ಯ ಕೇಂದ್ರ ಪರಿಶೀಲನೆ</strong><br />ವಿದ್ಯಾಪೀಠದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯ ಆಯುಕ್ತರು, ‘ದಿನಕ್ಕೆ ಎಷ್ಟು ಸೋಂಕಿತರ ಪತ್ತೆಯಾಗುತ್ತಿದ್ದಾರೆ. ಸೋಂಕಿತರ ನೇರ ಸಂಪರ್ಕ ಹೊಂದಿದವರ ಪತ್ತೆ ಕಾರ್ಯ ಹೇಗೆ ನಡೆಯುತ್ತಿದೆ’ ಎಂದು ಮಾಹಿತಿ ಪಡೆದರು.</p>.<p>‘ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದು ಆರೈಕೆ ಪಡೆಯುವವರ ಮೇಲೆ ನಿಗಾವಹಿಸಲಾಗುತ್ತಿದೆಯೇ. ಸೋಂಕಿತರ ಕೈಗೆ ಮುದ್ರೆ ಹಾಕುವ ಹಾಗೂ ವೈದ್ಯಕೀಯ ಕಿಟ್ ಒದಗಿಸುವ ಬಗ್ಗೆಯೂ ವಿವರ ಕೇಳಿದರು.</p>.<p>‘ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ದೃಢಪಟ್ಟವರಿಗೆ ತಕ್ಷಣ ವೈದ್ಯಕೀಯ ಕಿಟ್ ಒದಗಿಸಬೇಕು. ಮನೆಯಲ್ಲೇ ಆರೈಕೆಗೆ ಒಳಗಾಗುವ ಸೋಂಕಿತರು ಹೊರಗೆ ಬಂದು ಅಡ್ಡಾಡದಂತೆ ಸೂಚನೇ ನೀಡಬೇಕು’ ಎಂದು ತಿಳಿಸಿದರು.</p>.<p><strong>ಅಗಡಿ ನರ್ಸಿಂಗ್ ಹೋಮ್ಗೆ ದಿಢೀರ್ ಭೇಟಿ</strong><br />ಅಗಡಿ ನರ್ಸಿಂಗ್ ಹೋಮ್ಗೆ ಮುಖ್ಯ ಆಯುಕ್ತರು ದಿಢೀರ್ ಭೇಟಿ ನೀಡಿ ಅಲ್ಲಿನ ಚಿಕಿತ್ಸಾ ವ್ಯವಸ್ಥೆ ಮತ್ತು ಆಕ್ಸಿಜನ್ ಪೂರೈಕೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಹಿಂದೆ ಆಸ್ಪತ್ರೆಗೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವಾರಕ್ಕೊಮ್ಮೆ ಆಮ್ಲಜನಕ ಪೂರೈಕೆ ಆಗುತ್ತಿತ್ತು. ಬೇಡಿಕೆ ಹೆಚ್ಚಾಗಿದ್ದರಿಂದ ಈಗ ದಿನಕ್ಕೊಮ್ಮೆ ಸರಬರಾಜು ಆಗುತ್ತಿದೆ ಎಂದು ಅಲ್ಲಿನ ಸಿಬ್ಬಂದಿ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯ ದಕ್ಷಿಣ ವಲಯ ವ್ಯಾಪ್ತಿಯ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜಿನ ಪುರುಷರ ವಸತಿನಿಲಯದಲ್ಲಿ ಕೋವಿಡ್ ಆರೈಕೆ ಕೇಂದ್ರ ಮತ್ತು ಚಿಕಿತ್ಸೆ ನಿರ್ಧಾರ ಕೇಂದ್ರವನ್ನು (ಟ್ರಯಾಜಿಂಗ್ ಸೆಂಟರ್) ಸ್ಥಾಪಿಸಲಾಗಿದೆ.</p>.<p>ಈ ಕೇಂದ್ರದಲ್ಲಿ 20 ಹಾಸಿಗೆಗಳಿಗೆ ಆಮ್ಲಜನಕ ಸಾಂದ್ರೀಕರಣ ಸಾಧನಗಳನ್ನು ಒದಗಿಸಲಾಗಿದೆ. ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಈ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಕೇಂದ್ರಕ್ಕೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿರುವ ಬಗ್ಗೆ ವಿಚಾರಿಸಿದರು. ಚಿಕಿತ್ಸೆ ಸರದಿ ನಿರ್ಧರಿಸುವಾಗ ಪಾಲಿಸಬೇಕಾದ ಅಂಶಗಳ ಬಗ್ಗೆ ಸಿಬ್ಬಂದಿಗೆ ಸಲಹೆಗಳನ್ನು ನೀಡಿದರು.</p>.<p>ವಿದ್ಯಾರ್ಥಿ ನಿಯಲದಲ್ಲಿ ಇನ್ನಷ್ಟು ಸ್ಥಳಾವಕಾಶ ಇರುವುದರಿಂದ ಹೆಚ್ಚುವರಿಯಾಗಿ 20 ಸಾಮಾನ್ಯ ಹಾಸಿಗೆಗಳನ್ನು ಅಳವಡಿಸುವಂತೆ ವಲಯದ ಜಂಟಿ ಆಯುಕ್ತ ವೀರಭದ್ರಸ್ವಾಮಿ ಹಾಗೂ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ಅವರಿಗೆ ಸೂಚಿಸಿದರು.</p>.<p>ಶಾಸಕ ರವಿ ಸುಬ್ರಹ್ಮಣ್ಯ, ವಿಶೇಷ ಆಯುಕ್ತರು (ಆರೋಗ್ಯ) ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಜೊತೆಯಲ್ಲಿದ್ದರು.</p>.<p>ವಿಲ್ಸನ್ ಗಾರ್ಡನ್ ಹೆರಿಗೆ ಆಸ್ಪತ್ರೆಯಲ್ಲಿರುವ ಸ್ಥಿರೀಕರಣ ಕೇಂದ್ರ ಹಾಗೂ ಚಿಕಿತ್ಸೆ ನಿರ್ಧಾರ ಕೇಂದ್ರಕ್ಕೂ ಮುಖ್ಯ ಆಯುಕ್ತರು ಭೇಟಿ ನೀಡಿ ಪರಿಶೀಲಿಸಿದರು. ಈ ಕೇಂದ್ರದಲ್ಲಿ ಇದುವರೆಗೆ 47 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಈ ಕೇಂದ್ರದ ಬಗ್ಗೆ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಮಾಹಿತಿ ನೀಡಬೇಕು. ಚಿಕಿತ್ಸೆ ನಿರ್ಧಾರ ಕೇಂದ್ರಗಳಿಂದ ಆಗುವ ಅನುಕೂಲಗಳ ಬಗ್ಗೆಯೂ ಪ್ರಚುರಪಡಿಸಬೇಕು ಎಂದು ಆರೋಗ್ಯ ವೈದ್ಯಾಧಿಕಾರಿಗೆ ಮುಖ್ಯ ಆಯುಕ್ತರು ಸೂಚಿಸಿದರು.</p>.<p><strong>ವಿದ್ಯಾಪೀಠ ಆರೋಗ್ಯ ಕೇಂದ್ರ ಪರಿಶೀಲನೆ</strong><br />ವಿದ್ಯಾಪೀಠದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯ ಆಯುಕ್ತರು, ‘ದಿನಕ್ಕೆ ಎಷ್ಟು ಸೋಂಕಿತರ ಪತ್ತೆಯಾಗುತ್ತಿದ್ದಾರೆ. ಸೋಂಕಿತರ ನೇರ ಸಂಪರ್ಕ ಹೊಂದಿದವರ ಪತ್ತೆ ಕಾರ್ಯ ಹೇಗೆ ನಡೆಯುತ್ತಿದೆ’ ಎಂದು ಮಾಹಿತಿ ಪಡೆದರು.</p>.<p>‘ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದು ಆರೈಕೆ ಪಡೆಯುವವರ ಮೇಲೆ ನಿಗಾವಹಿಸಲಾಗುತ್ತಿದೆಯೇ. ಸೋಂಕಿತರ ಕೈಗೆ ಮುದ್ರೆ ಹಾಕುವ ಹಾಗೂ ವೈದ್ಯಕೀಯ ಕಿಟ್ ಒದಗಿಸುವ ಬಗ್ಗೆಯೂ ವಿವರ ಕೇಳಿದರು.</p>.<p>‘ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ದೃಢಪಟ್ಟವರಿಗೆ ತಕ್ಷಣ ವೈದ್ಯಕೀಯ ಕಿಟ್ ಒದಗಿಸಬೇಕು. ಮನೆಯಲ್ಲೇ ಆರೈಕೆಗೆ ಒಳಗಾಗುವ ಸೋಂಕಿತರು ಹೊರಗೆ ಬಂದು ಅಡ್ಡಾಡದಂತೆ ಸೂಚನೇ ನೀಡಬೇಕು’ ಎಂದು ತಿಳಿಸಿದರು.</p>.<p><strong>ಅಗಡಿ ನರ್ಸಿಂಗ್ ಹೋಮ್ಗೆ ದಿಢೀರ್ ಭೇಟಿ</strong><br />ಅಗಡಿ ನರ್ಸಿಂಗ್ ಹೋಮ್ಗೆ ಮುಖ್ಯ ಆಯುಕ್ತರು ದಿಢೀರ್ ಭೇಟಿ ನೀಡಿ ಅಲ್ಲಿನ ಚಿಕಿತ್ಸಾ ವ್ಯವಸ್ಥೆ ಮತ್ತು ಆಕ್ಸಿಜನ್ ಪೂರೈಕೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಹಿಂದೆ ಆಸ್ಪತ್ರೆಗೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವಾರಕ್ಕೊಮ್ಮೆ ಆಮ್ಲಜನಕ ಪೂರೈಕೆ ಆಗುತ್ತಿತ್ತು. ಬೇಡಿಕೆ ಹೆಚ್ಚಾಗಿದ್ದರಿಂದ ಈಗ ದಿನಕ್ಕೊಮ್ಮೆ ಸರಬರಾಜು ಆಗುತ್ತಿದೆ ಎಂದು ಅಲ್ಲಿನ ಸಿಬ್ಬಂದಿ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>