ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನ.27ರಿಂದಲೂ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಗಾಗ್ಗೆ ಜ್ವರ ಬರುತ್ತಿತ್ತು. ಮನೆ ಹಾಗೂ ಕಚೇರಿಯಲ್ಲೇ ಚುಚ್ಚುಮದ್ದು ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿದ್ದರು. ಬುಧವಾರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಚಾಲುಕ್ಯ ವೃತ್ತದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ ತೀವ್ರಗೊಂಡಿತ್ತು. ಜೊತೆಗೆ ಮೂತ್ರ ಸಂಬಂಧಿ ಸೋಂಕು ಹೆಚ್ಚಾಗಿದ್ದ ರಿಂದ ವೈದ್ಯರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ. ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಇರಬೇಕು ಎಂದು ವೈದ್ಯರು ಸೂಚಿಸಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.