<p><strong>ಬೆಂಗಳೂರು:</strong> ‘ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಸೋಂಕಿತರ ಸಂಪರ್ಕ ಪತ್ತೆ ಕಾರ್ಯವನ್ನು ಇನ್ನಷ್ಟು ಸದೃಢ ಮತ್ತು ಚುರುಕುಗೊಳಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಪಾಲಿಕೆ ವ್ಯಾಪ್ತಿಯಲ್ಲಿ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಬೇಕು’ ಎಂದು ಹೇಳಿದರು.</p>.<p><strong>ನಿತ್ಯ 35 ಸಾವಿರ ಲಸಿಕೆ:</strong></p>.<p>‘ನಗರದಲ್ಲಿ ಪ್ರತಿನಿತ್ಯ ಸುಮಾರು 35,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುತ್ತಿದೆ’ ಎಂದರು.</p>.<p>‘ಅಪಾರ್ಟ್ಮೆಂಟ್ಗಳಲ್ಲಿರುವ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು’ ಎಂದರು.</p>.<p><strong>ಪೂರ್ವ ವಲಯ ವಾರ್ ರೂಂಗೆ ಭೇಟಿ:</strong></p>.<p>ಪೂರ್ವ ವಲಯ ವ್ಯಾಪ್ತಿಗೆ ಸಂಬಂಧಿಸಿದಂತೆ ವಾರ್ ರೂಂಗೆ ಭೇಟಿ ನೀಡಿದ ಗೌರವ್ ಗುಪ್ತ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುವ ಪ್ರಕ್ರಿಯೆಯ ಪರಿಶೀಲನೆ ನಡೆಸಿದರು.</p>.<p>‘ಮನೆಗಳಲ್ಲಿಯೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಿತ್ಯ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿಕೊಳ್ಳಬೇಕು’ ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.</p>.<p>ಇದೇ ವೇಳೆ, ಗೌರವ್ ಗುಪ್ತ ಅವರು ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದರು.</p>.<p>ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್, ಜಂಟಿ ಆಯುಕ್ತರಾದ ಪಲ್ಲವಿ, ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜೇಂದ್ರ, ವಲಯ ಆರೋಗ್ಯಾಧಿಕಾರಿ ಡಾ. ಸಿದ್ದಪ್ಪಾಜಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಸೋಂಕಿತರ ಸಂಪರ್ಕ ಪತ್ತೆ ಕಾರ್ಯವನ್ನು ಇನ್ನಷ್ಟು ಸದೃಢ ಮತ್ತು ಚುರುಕುಗೊಳಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಪಾಲಿಕೆ ವ್ಯಾಪ್ತಿಯಲ್ಲಿ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಬೇಕು’ ಎಂದು ಹೇಳಿದರು.</p>.<p><strong>ನಿತ್ಯ 35 ಸಾವಿರ ಲಸಿಕೆ:</strong></p>.<p>‘ನಗರದಲ್ಲಿ ಪ್ರತಿನಿತ್ಯ ಸುಮಾರು 35,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುತ್ತಿದೆ’ ಎಂದರು.</p>.<p>‘ಅಪಾರ್ಟ್ಮೆಂಟ್ಗಳಲ್ಲಿರುವ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು’ ಎಂದರು.</p>.<p><strong>ಪೂರ್ವ ವಲಯ ವಾರ್ ರೂಂಗೆ ಭೇಟಿ:</strong></p>.<p>ಪೂರ್ವ ವಲಯ ವ್ಯಾಪ್ತಿಗೆ ಸಂಬಂಧಿಸಿದಂತೆ ವಾರ್ ರೂಂಗೆ ಭೇಟಿ ನೀಡಿದ ಗೌರವ್ ಗುಪ್ತ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುವ ಪ್ರಕ್ರಿಯೆಯ ಪರಿಶೀಲನೆ ನಡೆಸಿದರು.</p>.<p>‘ಮನೆಗಳಲ್ಲಿಯೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಿತ್ಯ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿಕೊಳ್ಳಬೇಕು’ ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.</p>.<p>ಇದೇ ವೇಳೆ, ಗೌರವ್ ಗುಪ್ತ ಅವರು ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದರು.</p>.<p>ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್, ಜಂಟಿ ಆಯುಕ್ತರಾದ ಪಲ್ಲವಿ, ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜೇಂದ್ರ, ವಲಯ ಆರೋಗ್ಯಾಧಿಕಾರಿ ಡಾ. ಸಿದ್ದಪ್ಪಾಜಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>