<p><strong>ಬೆಂಗಳೂರು</strong>: ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಿ, ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಮಳೆಗಾಲದ ಸಂದರ್ಭದಲ್ಲಿ ವಲಯವಾರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಅವರು ಮಾತನಾಡಿದರು.</p><p>ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು.</p>.<p>ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಆರ್ಸಿಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.</p><p>ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಢೀಕರಣ ನೀಡಬೇಕು. ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ ಕೈಗೊಳ್ಳುವುದರ ಜೊತೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.</p><p>183 ಕೆರೆಗಳಲ್ಲಿ 13 ಕೆರೆಗಳಿಗೆ ತೂಬು (ಸ್ಲೂಯಿಸ್ ಗೇಟ್) ಅಳವಡಿಸಲಾಗಿದೆ. ತೂಬು ಅಳವಡಿಸಿರುವ ಕೆರೆಗಳಲ್ಲಿ ನೀರು ತುಂಬಿದ್ದರೆ ನೀರಿನ ಮಟ್ಟವನ್ನು ಕಡಿಮೆ ಮಾಡಿ ಮಳೆ ನೀರು ತುಂಬಲು ಅನುವಾಗುವಂತೆ ಮಾಡಬೇಕು. ಉಳಿದ ಎಲ್ಲ ಕೆರೆಗಳಿಗೂ ಹಂತ-ಹಂತವಾಗಿ ತೂಬುಗಳನ್ನು ಅಳವಡಿಸಲು ಹಾಗೂ ತೆರವು ಮಾಡಲು ಯೋಜನೆ ರೂಪಿಸಬೇಕು ಎಂದು ಕೆರೆಗಳ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.</p><p>ಮಳೆಗಾಲದ ವೇಳೆ ಧರೆಗುರುಳಿದ ಮರ, ಕೊಂಬೆಗಳನ್ನು ಕೂಡಲೇ ತೆರವು ಮಾಡಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ಒಣಗಿದ, ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆಗಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದರು.</p><p>ರಸ್ತೆ ಬದಿಯಲ್ಲಿ ಆಟೋ ಟಿಪ್ಪರ್ಗಳಿಂದ ಕಾಂಪ್ಯಾಕ್ಟರ್ಗಳಿಗೆ ತ್ಯಾಜ್ಯ ವರ್ಗಾವಣೆ ಮಾಡುತ್ತಿದ್ದು, ಇದನ್ನು ಸ್ಥಳಾಂತರ ಮಾಡಬೇಕು. ಪಾಲಿಕೆಯ ಜಾಗ ಅಥವಾ ಇನ್ನಿತರೆ ಸ್ಥಳಗಳನ್ನು ಗುರುತಿಸಬೇಕು ಎಂದು ಹೇಳಿದರು.</p><p>ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯವನ್ನು ಎಂಟೂ ವಲಯಗಳ ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಬೇಕು ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ರಮ್ಯಾ, ದಿಗ್ವಿಜಯ್ ಬೋಡ್ಕೆ, ಕರೀಗೌಡ, ಸ್ನೇಹಲ್, ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಿ, ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಮಳೆಗಾಲದ ಸಂದರ್ಭದಲ್ಲಿ ವಲಯವಾರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಅವರು ಮಾತನಾಡಿದರು.</p><p>ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು.</p>.<p>ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಆರ್ಸಿಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.</p><p>ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಢೀಕರಣ ನೀಡಬೇಕು. ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ ಕೈಗೊಳ್ಳುವುದರ ಜೊತೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.</p><p>183 ಕೆರೆಗಳಲ್ಲಿ 13 ಕೆರೆಗಳಿಗೆ ತೂಬು (ಸ್ಲೂಯಿಸ್ ಗೇಟ್) ಅಳವಡಿಸಲಾಗಿದೆ. ತೂಬು ಅಳವಡಿಸಿರುವ ಕೆರೆಗಳಲ್ಲಿ ನೀರು ತುಂಬಿದ್ದರೆ ನೀರಿನ ಮಟ್ಟವನ್ನು ಕಡಿಮೆ ಮಾಡಿ ಮಳೆ ನೀರು ತುಂಬಲು ಅನುವಾಗುವಂತೆ ಮಾಡಬೇಕು. ಉಳಿದ ಎಲ್ಲ ಕೆರೆಗಳಿಗೂ ಹಂತ-ಹಂತವಾಗಿ ತೂಬುಗಳನ್ನು ಅಳವಡಿಸಲು ಹಾಗೂ ತೆರವು ಮಾಡಲು ಯೋಜನೆ ರೂಪಿಸಬೇಕು ಎಂದು ಕೆರೆಗಳ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.</p><p>ಮಳೆಗಾಲದ ವೇಳೆ ಧರೆಗುರುಳಿದ ಮರ, ಕೊಂಬೆಗಳನ್ನು ಕೂಡಲೇ ತೆರವು ಮಾಡಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ಒಣಗಿದ, ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆಗಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದರು.</p><p>ರಸ್ತೆ ಬದಿಯಲ್ಲಿ ಆಟೋ ಟಿಪ್ಪರ್ಗಳಿಂದ ಕಾಂಪ್ಯಾಕ್ಟರ್ಗಳಿಗೆ ತ್ಯಾಜ್ಯ ವರ್ಗಾವಣೆ ಮಾಡುತ್ತಿದ್ದು, ಇದನ್ನು ಸ್ಥಳಾಂತರ ಮಾಡಬೇಕು. ಪಾಲಿಕೆಯ ಜಾಗ ಅಥವಾ ಇನ್ನಿತರೆ ಸ್ಥಳಗಳನ್ನು ಗುರುತಿಸಬೇಕು ಎಂದು ಹೇಳಿದರು.</p><p>ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯವನ್ನು ಎಂಟೂ ವಲಯಗಳ ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಬೇಕು ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ರಮ್ಯಾ, ದಿಗ್ವಿಜಯ್ ಬೋಡ್ಕೆ, ಕರೀಗೌಡ, ಸ್ನೇಹಲ್, ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>