<p><strong>ಬೆಂಗಳೂರು</strong>: ರಾಜ್ಯ ರಾಜಧಾನಿಯು ದೇಶದ ಪ್ರಮುಖ ಕೋವಿಡ್ ಹಾಟ್ಸ್ಪಾಟ್ ಆಗಿರುವ ಬೆನ್ನಲ್ಲೇ ಆಡಳಿತದಲ್ಲೂ ದೊಡ್ಡ ಬದಲಾವಣೆಯಾಗಿದೆ. ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಅವರನ್ನು ರಾಜ್ಯ ಸರ್ಕಾರ ಶನಿವಾರ ದಿಢೀರ್ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಈ ಹಿಂದೆ ಇದೇ ಹುದ್ದೆ ನಿರ್ವಹಿಸಿದ್ದ ಎನ್. ಮಂಜುನಾಥ ಪ್ರಸಾದ್ ಅವರನ್ನು ನೇಮಿಸಿದೆ.</p>.<p>2019ರ ಆಗಸ್ಟ್ನಲ್ಲಿ ಅನಿಲ್ಕುಮಾರ್ ಅವರು ಆಯುಕ್ತರಾಗಿ ವರ್ಗವಾಗುವ ಮುನ್ನ ಮೂರು ವರ್ಷಗಳ ಕಾಲ ಈ ಹುದ್ದೆಯನ್ನು ಮಂಜುನಾಥ ಪ್ರಸಾದ್ ನಿರ್ವಹಿಸಿದ್ದರು. ಶನಿವಾರವೇ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಒಆರ್ ಹುದ್ದೆಗಳನ್ನೂ ಹೆಚ್ಚುವರಿಯಾಗಿ ನಿಭಾಯಿಸಬೇಕಾಗಿದೆ.</p>.<p>ಅನಿಲ್ಕುಮಾರ್ ಅವರಿಗೆ ಸಾರ್ವಜನಿಕ ಉದ್ದಮೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆ ವಹಿಸಲಾಗಿದೆ. ಈ ಹುದ್ದೆಯನ್ನು ಪ್ರಸ್ತುತ ಕಾರ್ಯದರ್ಶಿ ದರ್ಜೆಯ ಅಧಿಕಾರಿ ನಿರ್ವಹಿಸುತ್ತಿದ್ದರು.</p>.<p>ಕೊರೊನಾ ಸೋಂಕು ಹರಡುವಿಕೆ ಪ್ರಾಥಮಿಕ ಹಂತದಲ್ಲಿದ್ದಾಗ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸೆಗಳು ವ್ಯಕ್ತವಾಗಿದ್ದವು. ಆದರೆ, ಕಳೆದ ಎರಡು ತಿಂಗಳಿಂದ ಅದು ಕ್ರಮೇಣ ಬದಲಾಗುತ್ತಾ ಹೋಯಿತು. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಾ ಹೋದಂತೆ ಹೈಕೋರ್ಟ್ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p>ಸರ್ಕಾರದ ಮೂಲಗಳ ಪ್ರಕಾರ, ‘ಬೆಂಗಳೂರಿನ ಬಹುತೇಕ ಶಾಸಕರು ಅನಿಲ್ಕುಮಾರ್ ವಿರುದ್ಧ ಮುಖ್ಯಮಂತ್ರಿ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಯಾರೊಬ್ಬರೂ ಅವರ ಬೆಂಬಲಕ್ಕೆ ನಿಲ್ಲಲಿಲ್ಲ. ಇದೇ ಅವರಿಗೆ ಮುಳುವಾಯಿತು.’</p>.<p>‘₹436 ಕೋಟಿ ಮೊತ್ತದ ಯೋಜನೆಯನ್ನು ಕೆಆರ್ಐಡಿಎಲ್ಗೆ ನೀಡಿದ್ದು ಕೂಡ ಅವರ ಮೇಲೆ ಅಸಮಾಧಾನ ಹೆಚ್ಚಾಗುವಂತೆ ಮಾಡಿತು. ಬೆಂಗಳೂರಿನ ಪ್ರಭಾವಿ ಸಚಿವರೊಬ್ಬರ ಮಾತನ್ನು ಅನಿಲ್ಕುಮಾರ್ ಕೇಳುತ್ತಿರಲಿಲ್ಲ. ಇದೂ ಕೂಡ ಅವರ ವರ್ಗಾವಣೆಗೆ ಕಾರಣವಾಯಿತು’ ಎಂದು ಮೂಲಗಳು ಹೇಳಿವೆ.</p>.<p>‘ಬಿಐಇಸಿಯಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ಸಾಮಗ್ರಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದಿರುವುದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ಬೇರೆಯವರನ್ನು ರಕ್ಷಣೆ ಮಾಡಲು ಅನಿಲ್ಕುಮಾರ್ ಅವರನ್ನು ತಲೆದಂಡ ಮಾಡಲಾಗಿದೆ’ ಎಂದೂ ಹೇಳಲಾಗಿದೆ.</p>.<p>‘ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಕೇಂದ್ರದ ತಂಡ ಮಾಡಿದ ಟೀಕೆಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದೂ ಮೂಲಗಳು ಅಭಿಪ್ರಾಯಪಟ್ಟಿವೆ.</p>.<p>ಕೋವಿಡ್ ಪ್ರಕರಣಗಳು ತಾರಕಕ್ಕೆ ಏರಿಕೆಯಾಗಿರುವ ಸಂದರ್ಭದಲ್ಲಿ ಪಾಲಿಕೆಯ ಹೊಣೆ ಹೊರಲು ಮಂಜುನಾಥ್ ಪ್ರಸಾದ್ ಕೂಡ ಆಸಕ್ತಿ ವಹಿಸಿರಲಿಲ್ಲ. ಮುಖ್ಯಮಂತ್ರಿ ಕಚೇರಿ ನಿರ್ದಿಷ್ಟವಾಗಿ ಸೂಚನೆ ನೀಡಿದ ಬಳಿಕ ನಿರ್ಧಾರ ಬದಲಿಸಿ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>ವರ್ಗಾವಣೆ ಪ್ರಶ್ನಿಸಿ ಅನಿಲ್ಕುಮಾರ್ ಅವರು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಈ ಬಗ್ಗೆ ಖಚಿತಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅನಿಲ್ಕುಮಾರ್ ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೊರೆ?</strong><br />ವರ್ಗಾವಣೆ ಪ್ರಶ್ನಿಸಿ ಅನಿಲ್ಕುಮಾರ್ ಅವರು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಈ ಬಗ್ಗೆ ಖಚಿತಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅನಿಲ್ಕುಮಾರ್ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ರಾಜಧಾನಿಯು ದೇಶದ ಪ್ರಮುಖ ಕೋವಿಡ್ ಹಾಟ್ಸ್ಪಾಟ್ ಆಗಿರುವ ಬೆನ್ನಲ್ಲೇ ಆಡಳಿತದಲ್ಲೂ ದೊಡ್ಡ ಬದಲಾವಣೆಯಾಗಿದೆ. ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಅವರನ್ನು ರಾಜ್ಯ ಸರ್ಕಾರ ಶನಿವಾರ ದಿಢೀರ್ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಈ ಹಿಂದೆ ಇದೇ ಹುದ್ದೆ ನಿರ್ವಹಿಸಿದ್ದ ಎನ್. ಮಂಜುನಾಥ ಪ್ರಸಾದ್ ಅವರನ್ನು ನೇಮಿಸಿದೆ.</p>.<p>2019ರ ಆಗಸ್ಟ್ನಲ್ಲಿ ಅನಿಲ್ಕುಮಾರ್ ಅವರು ಆಯುಕ್ತರಾಗಿ ವರ್ಗವಾಗುವ ಮುನ್ನ ಮೂರು ವರ್ಷಗಳ ಕಾಲ ಈ ಹುದ್ದೆಯನ್ನು ಮಂಜುನಾಥ ಪ್ರಸಾದ್ ನಿರ್ವಹಿಸಿದ್ದರು. ಶನಿವಾರವೇ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಒಆರ್ ಹುದ್ದೆಗಳನ್ನೂ ಹೆಚ್ಚುವರಿಯಾಗಿ ನಿಭಾಯಿಸಬೇಕಾಗಿದೆ.</p>.<p>ಅನಿಲ್ಕುಮಾರ್ ಅವರಿಗೆ ಸಾರ್ವಜನಿಕ ಉದ್ದಮೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆ ವಹಿಸಲಾಗಿದೆ. ಈ ಹುದ್ದೆಯನ್ನು ಪ್ರಸ್ತುತ ಕಾರ್ಯದರ್ಶಿ ದರ್ಜೆಯ ಅಧಿಕಾರಿ ನಿರ್ವಹಿಸುತ್ತಿದ್ದರು.</p>.<p>ಕೊರೊನಾ ಸೋಂಕು ಹರಡುವಿಕೆ ಪ್ರಾಥಮಿಕ ಹಂತದಲ್ಲಿದ್ದಾಗ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸೆಗಳು ವ್ಯಕ್ತವಾಗಿದ್ದವು. ಆದರೆ, ಕಳೆದ ಎರಡು ತಿಂಗಳಿಂದ ಅದು ಕ್ರಮೇಣ ಬದಲಾಗುತ್ತಾ ಹೋಯಿತು. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಾ ಹೋದಂತೆ ಹೈಕೋರ್ಟ್ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p>ಸರ್ಕಾರದ ಮೂಲಗಳ ಪ್ರಕಾರ, ‘ಬೆಂಗಳೂರಿನ ಬಹುತೇಕ ಶಾಸಕರು ಅನಿಲ್ಕುಮಾರ್ ವಿರುದ್ಧ ಮುಖ್ಯಮಂತ್ರಿ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಯಾರೊಬ್ಬರೂ ಅವರ ಬೆಂಬಲಕ್ಕೆ ನಿಲ್ಲಲಿಲ್ಲ. ಇದೇ ಅವರಿಗೆ ಮುಳುವಾಯಿತು.’</p>.<p>‘₹436 ಕೋಟಿ ಮೊತ್ತದ ಯೋಜನೆಯನ್ನು ಕೆಆರ್ಐಡಿಎಲ್ಗೆ ನೀಡಿದ್ದು ಕೂಡ ಅವರ ಮೇಲೆ ಅಸಮಾಧಾನ ಹೆಚ್ಚಾಗುವಂತೆ ಮಾಡಿತು. ಬೆಂಗಳೂರಿನ ಪ್ರಭಾವಿ ಸಚಿವರೊಬ್ಬರ ಮಾತನ್ನು ಅನಿಲ್ಕುಮಾರ್ ಕೇಳುತ್ತಿರಲಿಲ್ಲ. ಇದೂ ಕೂಡ ಅವರ ವರ್ಗಾವಣೆಗೆ ಕಾರಣವಾಯಿತು’ ಎಂದು ಮೂಲಗಳು ಹೇಳಿವೆ.</p>.<p>‘ಬಿಐಇಸಿಯಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ಸಾಮಗ್ರಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದಿರುವುದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ಬೇರೆಯವರನ್ನು ರಕ್ಷಣೆ ಮಾಡಲು ಅನಿಲ್ಕುಮಾರ್ ಅವರನ್ನು ತಲೆದಂಡ ಮಾಡಲಾಗಿದೆ’ ಎಂದೂ ಹೇಳಲಾಗಿದೆ.</p>.<p>‘ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಕೇಂದ್ರದ ತಂಡ ಮಾಡಿದ ಟೀಕೆಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದೂ ಮೂಲಗಳು ಅಭಿಪ್ರಾಯಪಟ್ಟಿವೆ.</p>.<p>ಕೋವಿಡ್ ಪ್ರಕರಣಗಳು ತಾರಕಕ್ಕೆ ಏರಿಕೆಯಾಗಿರುವ ಸಂದರ್ಭದಲ್ಲಿ ಪಾಲಿಕೆಯ ಹೊಣೆ ಹೊರಲು ಮಂಜುನಾಥ್ ಪ್ರಸಾದ್ ಕೂಡ ಆಸಕ್ತಿ ವಹಿಸಿರಲಿಲ್ಲ. ಮುಖ್ಯಮಂತ್ರಿ ಕಚೇರಿ ನಿರ್ದಿಷ್ಟವಾಗಿ ಸೂಚನೆ ನೀಡಿದ ಬಳಿಕ ನಿರ್ಧಾರ ಬದಲಿಸಿ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>ವರ್ಗಾವಣೆ ಪ್ರಶ್ನಿಸಿ ಅನಿಲ್ಕುಮಾರ್ ಅವರು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಈ ಬಗ್ಗೆ ಖಚಿತಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅನಿಲ್ಕುಮಾರ್ ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೊರೆ?</strong><br />ವರ್ಗಾವಣೆ ಪ್ರಶ್ನಿಸಿ ಅನಿಲ್ಕುಮಾರ್ ಅವರು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಈ ಬಗ್ಗೆ ಖಚಿತಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅನಿಲ್ಕುಮಾರ್ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>