<p><strong>ಬೆಂಗಳೂರು:</strong> ಜಿಬಿಎ ವ್ಯಾಪ್ತಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವು ಕಾರ್ಯಾಚರಣೆ ಆರಂಭಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎಲ್ಲ ಇಲಾಖೆಗಳೊಂದಿಗಿನ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಬೇಕು. ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಸಂಚಾರ ಸಿಗ್ನಲ್ಗಳಿಗೆ ಅಡ್ಡಿಯಾಗಿರುವ, ಪಾದಚಾರಿ ಮಾರ್ಗಗಳಲ್ಲಿ ನಾಗರಿಕರ ತಲೆಗೆ ತಾಗುವ, ರಸ್ತೆಗಳಿಗೆ ವಾಲಿಕೊಂಡಿರುವ ಹಾಗೂ ವಿದ್ಯುತ್ ದೀಪಗಳಿಗೆ ಅಡ್ಡಿಯಾಗಿರುವ ಮರದ ರೆಂಬೆಗಳು/ ಕೊಂಬೆಗಳನ್ನು ಕೂಡಲೇ ಕತ್ತರಿಸಬೇಕು. ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಮರದ ಕೊಂಬೆಗಳನ್ನೂ ತೆರವುಗೊಳಿಸಬೇಕು ಎಂದು ಹೇಳಿದರು.</p>.<p>‘ಮಾರ್ಕ್ಸ್’ ತಂತ್ರಾಂಶದ ಮೂಲಕ ರಸ್ತೆ ಕತ್ತರಿಸಲು ಸಲ್ಲಿಸಿರುವ ಅರ್ಜಿಗಳಿಗೆ ತಕ್ಷಣ ಅನುಮತಿ ನೀಡಬೇಕು. ನಂತರ ಸಂಬಂಧಿತ ಇಲಾಖೆಗಳು ರಸ್ತೆ ಕತ್ತರಿಸುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ರಸ್ತೆ ಪುನರ್ ನಿರ್ಮಾಣ ಕಾರ್ಯವನ್ನು ಗುಣಮಟ್ಟದೊಂದಿಗೆ ನಿರ್ವಹಿಸಬೇಕು ಎಂದರು.</p>.<p>ಸಂಚಾರ ಪೊಲೀಸ್ ವಿಭಾಗವು ರಸ್ತೆಗಳಲ್ಲಿ ಮಳೆನೀರು ನಿಲ್ಲುವ ಸ್ಥಳಗಳ ಪಟ್ಟಿಯನ್ನು ಸಲ್ಲಿಸಿದ್ದು, ಅದರನ್ವಯ ಸ್ಥಳ ಪರಿಶೀಲನೆ ನಡೆಸಬೇಕು. ಮುಂಗಾರು ಮಳೆ ಪ್ರಾರಂಭವಾಗುವ ಮುನ್ನವೇ ಎಲ್ಲಾ ಪ್ರದೇಶಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಮಳೆನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ಹೇಳಿದರು.</p>.<p><strong>ಅಕ್ರಮ ಕಟ್ಟಡ ತೆರವು:</strong> </p><p>ಕೇಂದ್ರ ನಗರ ಪಾಲಿಕೆಯ ಶಾಂತಲಾನಗರದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳ ಭಾಗವನ್ನು ನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು.</p>.<h2>ಪಿಐಡಿ ಸಂಖ್ಯೆ: </h2><p>76-122-4 ಆಸ್ತಿಗೆ ಕಾಯ್ದೆಯಡಿ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ನಿಯಮಬಾಹಿರವಾಗಿ ನಿರ್ಮಿಸಲಾದ ಭಾಗಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಸೂಚಿಸಲಾಗಿತ್ತು. ಆದರೂ ಮಾಲೀಕರು ಅದನ್ನು ಪಾಲಿಸಿರಲಿಲ್ಲ. ಹೀಗಾಗಿ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡದ ಅಕ್ರಮ ಭಾಗಗಳನ್ನು ಬುಧವಾರ ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಬಿಎ ವ್ಯಾಪ್ತಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವು ಕಾರ್ಯಾಚರಣೆ ಆರಂಭಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎಲ್ಲ ಇಲಾಖೆಗಳೊಂದಿಗಿನ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಬೇಕು. ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಸಂಚಾರ ಸಿಗ್ನಲ್ಗಳಿಗೆ ಅಡ್ಡಿಯಾಗಿರುವ, ಪಾದಚಾರಿ ಮಾರ್ಗಗಳಲ್ಲಿ ನಾಗರಿಕರ ತಲೆಗೆ ತಾಗುವ, ರಸ್ತೆಗಳಿಗೆ ವಾಲಿಕೊಂಡಿರುವ ಹಾಗೂ ವಿದ್ಯುತ್ ದೀಪಗಳಿಗೆ ಅಡ್ಡಿಯಾಗಿರುವ ಮರದ ರೆಂಬೆಗಳು/ ಕೊಂಬೆಗಳನ್ನು ಕೂಡಲೇ ಕತ್ತರಿಸಬೇಕು. ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಮರದ ಕೊಂಬೆಗಳನ್ನೂ ತೆರವುಗೊಳಿಸಬೇಕು ಎಂದು ಹೇಳಿದರು.</p>.<p>‘ಮಾರ್ಕ್ಸ್’ ತಂತ್ರಾಂಶದ ಮೂಲಕ ರಸ್ತೆ ಕತ್ತರಿಸಲು ಸಲ್ಲಿಸಿರುವ ಅರ್ಜಿಗಳಿಗೆ ತಕ್ಷಣ ಅನುಮತಿ ನೀಡಬೇಕು. ನಂತರ ಸಂಬಂಧಿತ ಇಲಾಖೆಗಳು ರಸ್ತೆ ಕತ್ತರಿಸುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ರಸ್ತೆ ಪುನರ್ ನಿರ್ಮಾಣ ಕಾರ್ಯವನ್ನು ಗುಣಮಟ್ಟದೊಂದಿಗೆ ನಿರ್ವಹಿಸಬೇಕು ಎಂದರು.</p>.<p>ಸಂಚಾರ ಪೊಲೀಸ್ ವಿಭಾಗವು ರಸ್ತೆಗಳಲ್ಲಿ ಮಳೆನೀರು ನಿಲ್ಲುವ ಸ್ಥಳಗಳ ಪಟ್ಟಿಯನ್ನು ಸಲ್ಲಿಸಿದ್ದು, ಅದರನ್ವಯ ಸ್ಥಳ ಪರಿಶೀಲನೆ ನಡೆಸಬೇಕು. ಮುಂಗಾರು ಮಳೆ ಪ್ರಾರಂಭವಾಗುವ ಮುನ್ನವೇ ಎಲ್ಲಾ ಪ್ರದೇಶಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಮಳೆನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ಹೇಳಿದರು.</p>.<p><strong>ಅಕ್ರಮ ಕಟ್ಟಡ ತೆರವು:</strong> </p><p>ಕೇಂದ್ರ ನಗರ ಪಾಲಿಕೆಯ ಶಾಂತಲಾನಗರದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳ ಭಾಗವನ್ನು ನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು.</p>.<h2>ಪಿಐಡಿ ಸಂಖ್ಯೆ: </h2><p>76-122-4 ಆಸ್ತಿಗೆ ಕಾಯ್ದೆಯಡಿ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ನಿಯಮಬಾಹಿರವಾಗಿ ನಿರ್ಮಿಸಲಾದ ಭಾಗಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಸೂಚಿಸಲಾಗಿತ್ತು. ಆದರೂ ಮಾಲೀಕರು ಅದನ್ನು ಪಾಲಿಸಿರಲಿಲ್ಲ. ಹೀಗಾಗಿ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡದ ಅಕ್ರಮ ಭಾಗಗಳನ್ನು ಬುಧವಾರ ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>