ಮಲ್ಲೇಶ್ವರ, ವೈಯಾಲಿಕಾವಲ್, ಸದಾಶಿವನಗರದ ನಿವಾಸಿಗಳ ಕಲ್ಯಾಣ ಸಂಘಗಳ ಸದಸ್ಯರು ಹಾಗೂ ಸ್ಯಾಂಕಿ ಕೆರೆ ತಂಡದವರು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತುಷಾರ್ ಗಿರಿನಾಥ್, ‘ಮರಗಳ ಕಡಿತ ಮಾಡುವ ಯೋಜನೆ ಇದೀಗ ಬಿಎಲ್ಟಿಎಯಲ್ಲಿದೆ. ಅಲ್ಲಿ ತೀರ್ಮಾನವಾಗುವವರೆಗೂ ಮರ ಕಡಿಯಲು ಅನುಮತಿ ನೀಡುವ ಪ್ರಕ್ರಿಯೆ ನಡೆಯುವುದು ಬೇಡ ಎಂದು ಪ್ರಹ್ಲಾದ್ ಹಾಗೂ ಡಿಸಿಎಫ್ ಸರೀನಾ ಅವರಿಗೆ ಸೂಚಿಸಿದರು’ ಎಂದು ಸ್ಯಾಂಕಿ ಕೆರೆ ತಂಡದ ಸದಸ್ಯರು ಹೇಳಿದರು.