<p><strong>ಬೆಂಗಳೂರು</strong>: ನಗರದ ಅಪಾರ್ಟ್ಮೆಂಟ್ಗಳಲ್ಲಿರುವ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮನವಿ ಮಾಡಿದರು.</p>.<p>ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಂಡಿರುವ ‘ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ’ ಅಭಿಯಾನದ ಅಂಗವಾಗಿ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ನಡೆದ ವರ್ಚುವಲ್ ಸಭೆಯಲ್ಲಿ ಗುರುವಾರ ಅವರು ಮಾತನಾಡಿದರು.</p>.<p>ಅಪಾರ್ಟ್ಮೆಟ್ಗಳಲ್ಲಿ ನಡೆದ ಅಭಿಯಾನದ ಛಾಯಾಚಿತ್ರ ಹಾಗೂ ದೃಶ್ಯಾವಳಿಗಳನ್ನು ಸಂಗ್ರಹಿಸಿ ಅಂತರ್ಜಾಲ <em>https://harghartiranga.com</em> ನಲ್ಲಿ ಅಪ್ಲೋಡ್ ಮಾಡಲು ತಿಳಿಸಿದರು.</p>.<p>ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯ ಪ್ರತಿಯೊಂದು ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಬೇಕು. ಅದರಂತೆ ಇದುವರೆಗೆ 10 ಲಕ್ಷ ಧ್ವಜಗಳನ್ನು ವಿತರಿಸಿದ್ದು, ಇನ್ನೂ 5 ಲಕ್ಷ ಧ್ವಜಗಳನ್ನು ವಿತರಣೆ ಮಾಡಲಾಗುತ್ತಿದೆ. ಆಯಾ ವಲಯ ಜಂಟಿ ಆಯುಕ್ತರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಸಂಪರ್ಕಿಸಿ ಧ್ವಜಗಳನ್ನು ಮಾರಾಟ ಮಾಡಲು ತಿಳಿಸಿದರು.</p>.<p>‘ಈ ಬಾರಿ ರಾಷ್ಟ್ರಧ್ವಜವನ್ನು ಆ.12ರಿಂದ 15ರವರೆಗೆ ಹಗಲುರಾತ್ರಿ ಹಾರಿಸಬಹುದು. ಅಮೃತ ಮಹೋತ್ಸವದ ಅಂಗವಾಗಿ ವಿನಾಯಿತಿ ನೀಡಿಲಾಗಿದೆ. ಅಭಿಯಾನ ಮುಗಿದ ಬಳಿಕ ಅಂದರೆ ಆ.15ರ ಸೋಮವಾರ ಸಂಜೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ತೆಗೆದು ಮನೆಗಳಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಎಲ್ಲಾ ವಲಯ ಜಂಟಿ ಆಯುಕ್ತರು, ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಅಪಾರ್ಟ್ಮೆಂಟ್ಗಳಲ್ಲಿರುವ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮನವಿ ಮಾಡಿದರು.</p>.<p>ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಂಡಿರುವ ‘ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ’ ಅಭಿಯಾನದ ಅಂಗವಾಗಿ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ನಡೆದ ವರ್ಚುವಲ್ ಸಭೆಯಲ್ಲಿ ಗುರುವಾರ ಅವರು ಮಾತನಾಡಿದರು.</p>.<p>ಅಪಾರ್ಟ್ಮೆಟ್ಗಳಲ್ಲಿ ನಡೆದ ಅಭಿಯಾನದ ಛಾಯಾಚಿತ್ರ ಹಾಗೂ ದೃಶ್ಯಾವಳಿಗಳನ್ನು ಸಂಗ್ರಹಿಸಿ ಅಂತರ್ಜಾಲ <em>https://harghartiranga.com</em> ನಲ್ಲಿ ಅಪ್ಲೋಡ್ ಮಾಡಲು ತಿಳಿಸಿದರು.</p>.<p>ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯ ಪ್ರತಿಯೊಂದು ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಬೇಕು. ಅದರಂತೆ ಇದುವರೆಗೆ 10 ಲಕ್ಷ ಧ್ವಜಗಳನ್ನು ವಿತರಿಸಿದ್ದು, ಇನ್ನೂ 5 ಲಕ್ಷ ಧ್ವಜಗಳನ್ನು ವಿತರಣೆ ಮಾಡಲಾಗುತ್ತಿದೆ. ಆಯಾ ವಲಯ ಜಂಟಿ ಆಯುಕ್ತರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಸಂಪರ್ಕಿಸಿ ಧ್ವಜಗಳನ್ನು ಮಾರಾಟ ಮಾಡಲು ತಿಳಿಸಿದರು.</p>.<p>‘ಈ ಬಾರಿ ರಾಷ್ಟ್ರಧ್ವಜವನ್ನು ಆ.12ರಿಂದ 15ರವರೆಗೆ ಹಗಲುರಾತ್ರಿ ಹಾರಿಸಬಹುದು. ಅಮೃತ ಮಹೋತ್ಸವದ ಅಂಗವಾಗಿ ವಿನಾಯಿತಿ ನೀಡಿಲಾಗಿದೆ. ಅಭಿಯಾನ ಮುಗಿದ ಬಳಿಕ ಅಂದರೆ ಆ.15ರ ಸೋಮವಾರ ಸಂಜೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ತೆಗೆದು ಮನೆಗಳಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಎಲ್ಲಾ ವಲಯ ಜಂಟಿ ಆಯುಕ್ತರು, ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>