‘ಫಿಟ್ ಇಂಡಿಯಾ’ ಅಭಿಯಾನದ ಅಂಗವಾಗಿ ಬಿಬಿಎಂಪಿ ಹಾಗೂ ಬೆಂಗಳೂರು ಸ್ಮಾರ್ಟ್ಸಿಟಿ ಲಿಮಿಟೆಡ್ ಸಂಸ್ಥೆ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸೈಕ್ಲಥಾನ್ ಕಾರ್ಯಕ್ರಮದಲ್ಲೂ ಆಯುಕ್ತರು ಭಾಗವಹಿಸಿದ್ದರು. ಈ ಸೈಕಲ್ ಜಾಥಾದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ, ಬೆಂಗಳೂರು ಸ್ಮಾರ್ಟ್ ಸಿಟಿ ಸಂಸ್ಥೆಯ ವ್ಯವಸ್ತಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. ಇದೇ ಕಾರ್ಯಕ್ರಮದಲ್ಲಿ ಕೋವಿಡ್ ಯೋಧರನ್ನು ಸನ್ಮಾನಿಸಲಾಗಿತ್ತು. ಮಕ್ಕಳನ್ನು ಭಿಕ್ಷಾಟಣೆಗೆ ಬಳಸುತ್ತಿರುವುದರ ಕುರಿತು ಸಮೀಕ್ಷೆ ನಡೆಸುವ ಬಗ್ಗೆ ಶುಕ್ರವಾರ ಸಭೆ ನಡೆಸಿದ್ದರು.