<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರವುಗೊಳಿಸಿರುವ ಚರ್ಮ ಕುಟೀರಗಳ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಶುಕ್ರವಾರ ಅಧಿಕಾರಿಗಳ ಸಭೆಯಲ್ಲಿ ಅವರು, ‘ವಿವಿಧ ಕಾರಣಗಳಿಂದ 192 ಚರ್ಮ ಕುಟೀರಗಳನ್ನು ತೆರವುಗೊಳಿಸಿರುವ ಮಾಹಿತಿ ಇದೆ. ಅವರಿಗೆಲ್ಲ ಕಲ್ಯಾಣ ವಿಭಾಗದಿಂದ ಪುನಃ ಸೌಲಭ್ಯ ಕಲ್ಪಿಸಲಾಗುತ್ತದೆ. ಹೀಗಾಗಿ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಬೇಕು’ ಎಂದರು.</p>.<p>‘ಚರ್ಮ ಕುಟೀರಗಳನ್ನು ಹೊಂದಿದ್ದವರ ಮನೆಗೆ ಭೇಟಿ ನೀಡಿ, ಅವರು ಕುಟೀರ ಕಾರ್ಯದಲ್ಲಿ ಮುಂದುವರಿಯುತ್ತಾರೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ವಲಯವಾರು ಯಾವ ಸ್ಥಳದಲ್ಲಿ ಚರ್ಮ ಕುಟೀರಗಳನ್ನು ಅಳವಡಿಸಿಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿ ಅದರ ವರದಿಯನ್ನೂ ನೀಡಬೇಕು’ ಎಂದು ತಿಳಿಸಿದರು.</p>.<p>ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಜಂಟಿ ಆಯುಕ್ತರು, ಕಲ್ಯಾಣ ವಿಭಾಗದ ಅಧಿಕಾರಿಗಳು, ಚರ್ಮ ಕುಟೀರ ನಡೆಸುತ್ತಿದ್ದ ಜನರ ಪ್ರತಿನಿಧಿಗಳು ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರವುಗೊಳಿಸಿರುವ ಚರ್ಮ ಕುಟೀರಗಳ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಶುಕ್ರವಾರ ಅಧಿಕಾರಿಗಳ ಸಭೆಯಲ್ಲಿ ಅವರು, ‘ವಿವಿಧ ಕಾರಣಗಳಿಂದ 192 ಚರ್ಮ ಕುಟೀರಗಳನ್ನು ತೆರವುಗೊಳಿಸಿರುವ ಮಾಹಿತಿ ಇದೆ. ಅವರಿಗೆಲ್ಲ ಕಲ್ಯಾಣ ವಿಭಾಗದಿಂದ ಪುನಃ ಸೌಲಭ್ಯ ಕಲ್ಪಿಸಲಾಗುತ್ತದೆ. ಹೀಗಾಗಿ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಬೇಕು’ ಎಂದರು.</p>.<p>‘ಚರ್ಮ ಕುಟೀರಗಳನ್ನು ಹೊಂದಿದ್ದವರ ಮನೆಗೆ ಭೇಟಿ ನೀಡಿ, ಅವರು ಕುಟೀರ ಕಾರ್ಯದಲ್ಲಿ ಮುಂದುವರಿಯುತ್ತಾರೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ವಲಯವಾರು ಯಾವ ಸ್ಥಳದಲ್ಲಿ ಚರ್ಮ ಕುಟೀರಗಳನ್ನು ಅಳವಡಿಸಿಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿ ಅದರ ವರದಿಯನ್ನೂ ನೀಡಬೇಕು’ ಎಂದು ತಿಳಿಸಿದರು.</p>.<p>ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಜಂಟಿ ಆಯುಕ್ತರು, ಕಲ್ಯಾಣ ವಿಭಾಗದ ಅಧಿಕಾರಿಗಳು, ಚರ್ಮ ಕುಟೀರ ನಡೆಸುತ್ತಿದ್ದ ಜನರ ಪ್ರತಿನಿಧಿಗಳು ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>