<p><strong>ಬೆಂಗಳೂರು: </strong>‘ನಗರದಲ್ಲಿ ಕೋವಿಡ್ ಲಸಿಕೆ ವಿತರಿಸಲು ಸುಮಾರು 500 ಸ್ಥಳಗಳಿವೆ. ಈ ಪ್ರತಿ ಸ್ಥಳದಲ್ಲಿ ಕನಿಷ್ಠ 100ರಿಂದ 150 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ ಹೇಳಿದರು.</p>.<p>ನಗರದ ಕೋವಿಡ್ ಆರೈಕೆ ಕೇಂದ್ರಗಳಲ್ಲಿನ ಸಿದ್ಧತೆ, ಲಸಿಕೆ ವಿತರಣೆ ಕೇಂದ್ರ ಹಾಗೂ ಕೋವಿಡ್ ಪರೀಕ್ಷಾ ಕೇಂದ್ರಗಳ ಕಾರ್ಯಗಳನ್ನು ಅವರುಶನಿವಾರ ಪರಿಶೀಲಿಸಿದರು.</p>.<p>‘ಈಗಿರುವ ಲಸಿಕೆ ಕೇಂದ್ರಗಳ ಜೊತೆಗೆ ಅಗತ್ಯವಿರುವ ಕಡೆ ಹೆಚ್ಚುವರಿಯಾಗಿ ಹೊಸ ಕೇಂದ್ರ ತೆರೆಯಲಾಗುವುದು. ಲಸಿಕೆ ಪಡೆಯುವವರಿಗೆ ಅವಶ್ಯಕವಿರುವ ಕಡೆ ವಾಹನಗಳ ವ್ಯವಸ್ಥೆಯನ್ನು ಆಯಾ ವಲಯ ಆಯುಕ್ತರ ಮಟ್ಟದಲ್ಲಿ ಒದಗಿಸಲಾಗುವುದು’ ಎಂದರು.</p>.<p><strong>ಔಷಧಾಲಯಕ್ಕೆ ಭೇಟಿ:</strong></p>.<p>ನಗರದ ಆಡುಗೋಡಿ ಔಷಧಾಲಯವನ್ನು ಮುಖ್ಯ ಆಯುಕ್ತರು ಪರಿಶೀಲಿಸಿದರು. ಈ ವೇಳೆ ಲಸಿಕೆ ಪಡೆಯಲು ಬಂದವರನ್ನು ಮಾತನಾಡಿಸಿ ಲಸಿಕೆ ನೀಡುವ ವ್ಯವಸ್ಥೆ ಬಗ್ಗೆ ಹಾಗೂ ಪಡೆದ ನಂತರದ ಅನುಭವಗಳ ಬಗ್ಗೆ ಮಾಹಿತಿ ಪಡೆದರು.</p>.<p class="Subhead">ಆರೈಕೆ ಕೇಂದ್ರಗಳ ಸ್ಥಾಪನೆ ಶೀಘ್ರ:</p>.<p>‘ಬಾಷ್ ಸಂಸ್ಥೆಯು ಸಹಭಾಗಿತ್ವದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದನ್ನು ಪಾಲಿಕೆ ತೆಕ್ಕೆಗೆ ಪಡೆಯಲಿದ್ದೇವೆ. ಈ ಸಂಬಂಧ ಬಾಷ್ ಸಂಸ್ಥೆ ಹಾಗೂ ಪಾಲಿಕೆ ಜೊತೆ ಚರ್ಚೆ ನಡೆಯುತ್ತಿದೆ. ಕೋವಿಡ್ ಆರೈಕೆ ಕೇಂದ್ರ ಪ್ರಾರಂಭಿಸಲು ಇನ್ನೆರಡು ದಿಮಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯ ಆಯುಕ್ತರು ತಿಳಿಸಿದರು.</p>.<p>‘ಪಾಲಿಕೆಯ ಎಲ್ಲ ವಲಯಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ಎರಡು ಅಥವಾ ಮೂರು ಕೋವಿಡ್ ಆರೈಕೆ ಕೇಂದ್ರಗಳನ್ನು ಶೀಘ್ರವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಮನೆಯಲ್ಲಿ ಪ್ರತ್ಯೇಕವಾಗಿರಲು ಸಾಧ್ಯವಾಗದಂತಹ ಸೋಂಕಿತ ವ್ಯಕ್ತಿಗಳನ್ನು ಆರೈಕೆ ಕೇಂದ್ರಗಳಲ್ಲಿರಿಸಿ ಚಿಕಿತ್ಸೆ ನೀಡಿ ಆರೈಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಗರದಲ್ಲಿ ಕೋವಿಡ್ ಲಸಿಕೆ ವಿತರಿಸಲು ಸುಮಾರು 500 ಸ್ಥಳಗಳಿವೆ. ಈ ಪ್ರತಿ ಸ್ಥಳದಲ್ಲಿ ಕನಿಷ್ಠ 100ರಿಂದ 150 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ ಹೇಳಿದರು.</p>.<p>ನಗರದ ಕೋವಿಡ್ ಆರೈಕೆ ಕೇಂದ್ರಗಳಲ್ಲಿನ ಸಿದ್ಧತೆ, ಲಸಿಕೆ ವಿತರಣೆ ಕೇಂದ್ರ ಹಾಗೂ ಕೋವಿಡ್ ಪರೀಕ್ಷಾ ಕೇಂದ್ರಗಳ ಕಾರ್ಯಗಳನ್ನು ಅವರುಶನಿವಾರ ಪರಿಶೀಲಿಸಿದರು.</p>.<p>‘ಈಗಿರುವ ಲಸಿಕೆ ಕೇಂದ್ರಗಳ ಜೊತೆಗೆ ಅಗತ್ಯವಿರುವ ಕಡೆ ಹೆಚ್ಚುವರಿಯಾಗಿ ಹೊಸ ಕೇಂದ್ರ ತೆರೆಯಲಾಗುವುದು. ಲಸಿಕೆ ಪಡೆಯುವವರಿಗೆ ಅವಶ್ಯಕವಿರುವ ಕಡೆ ವಾಹನಗಳ ವ್ಯವಸ್ಥೆಯನ್ನು ಆಯಾ ವಲಯ ಆಯುಕ್ತರ ಮಟ್ಟದಲ್ಲಿ ಒದಗಿಸಲಾಗುವುದು’ ಎಂದರು.</p>.<p><strong>ಔಷಧಾಲಯಕ್ಕೆ ಭೇಟಿ:</strong></p>.<p>ನಗರದ ಆಡುಗೋಡಿ ಔಷಧಾಲಯವನ್ನು ಮುಖ್ಯ ಆಯುಕ್ತರು ಪರಿಶೀಲಿಸಿದರು. ಈ ವೇಳೆ ಲಸಿಕೆ ಪಡೆಯಲು ಬಂದವರನ್ನು ಮಾತನಾಡಿಸಿ ಲಸಿಕೆ ನೀಡುವ ವ್ಯವಸ್ಥೆ ಬಗ್ಗೆ ಹಾಗೂ ಪಡೆದ ನಂತರದ ಅನುಭವಗಳ ಬಗ್ಗೆ ಮಾಹಿತಿ ಪಡೆದರು.</p>.<p class="Subhead">ಆರೈಕೆ ಕೇಂದ್ರಗಳ ಸ್ಥಾಪನೆ ಶೀಘ್ರ:</p>.<p>‘ಬಾಷ್ ಸಂಸ್ಥೆಯು ಸಹಭಾಗಿತ್ವದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದನ್ನು ಪಾಲಿಕೆ ತೆಕ್ಕೆಗೆ ಪಡೆಯಲಿದ್ದೇವೆ. ಈ ಸಂಬಂಧ ಬಾಷ್ ಸಂಸ್ಥೆ ಹಾಗೂ ಪಾಲಿಕೆ ಜೊತೆ ಚರ್ಚೆ ನಡೆಯುತ್ತಿದೆ. ಕೋವಿಡ್ ಆರೈಕೆ ಕೇಂದ್ರ ಪ್ರಾರಂಭಿಸಲು ಇನ್ನೆರಡು ದಿಮಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯ ಆಯುಕ್ತರು ತಿಳಿಸಿದರು.</p>.<p>‘ಪಾಲಿಕೆಯ ಎಲ್ಲ ವಲಯಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ಎರಡು ಅಥವಾ ಮೂರು ಕೋವಿಡ್ ಆರೈಕೆ ಕೇಂದ್ರಗಳನ್ನು ಶೀಘ್ರವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಮನೆಯಲ್ಲಿ ಪ್ರತ್ಯೇಕವಾಗಿರಲು ಸಾಧ್ಯವಾಗದಂತಹ ಸೋಂಕಿತ ವ್ಯಕ್ತಿಗಳನ್ನು ಆರೈಕೆ ಕೇಂದ್ರಗಳಲ್ಲಿರಿಸಿ ಚಿಕಿತ್ಸೆ ನೀಡಿ ಆರೈಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>