ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇಷ್ಠತೆ ಮೀರಿ ಬಿಲ್‌ ಪಾವತಿ: ಎಸಿಬಿಗೆ ದೂರು

Last Updated 22 ಅಕ್ಟೋಬರ್ 2021, 16:52 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜೇಷ್ಠತೆ ಮೀರಿ ಕಾಮಗಾರಿಗಳ ಬಿಲ್ ಪಾವತಿ ಮಾಡಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಎ.ಎಸ್. ನರಸಿಂಹಮೂರ್ತಿ ದೂರು ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ, ಮೇಲ್ಸೇತುವೆ, ವಿದ್ಯುತ್, ಕಸ ನಿರ್ವಹಣೆ, ಮೂಲ ಸೌಕರ್ಯ ಕಾಮಗಾರಿಗಳನ್ನು ಹಲವು ಗುತ್ತಿಗೆದಾರರು ನಿರ್ವಹಿದ್ದಾರೆ. ‘ಬಿಲ್‌ ಪಾವತಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಜೇಷ್ಠತೆ ಆಧಾರದಲ್ಲಿ ಬಿಡುಗಡೆ ಮಾಡಬೇಕಿದೆ. ಆದರೆ, ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ನಿಯಮಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಅವರು ದೂರಿದ್ದಾರೆ.

‘ಎನ್‌ಸಿಸಿ ಲಿಮಿಟೆಡ್‌ ಸಂಸ್ಥೆಯ ₹28.61 ಕೋಟಿ ಬಿಲ್‌ ಅನ್ನು ತಡ ಮಾಡದೆ ಮತ್ತು ಉನ್ನತಾಧಿಕಾರಿಯ ಅನುಮೋದನೆ ಪಡೆಯದೆಯೇ ಪಾವತಿಸಿದ್ದಾರೆ. ಇದರಿಂದ ಇತರ ಗುತ್ತಿಗೆದಾರರಿಗೆ ಅನನುಕೂಲವಾಗಿದೆ. ಬಿಲ್‌ ಪಾವತಿಯ ಅಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT