ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ, ಮೇಲ್ಸೇತುವೆ, ವಿದ್ಯುತ್, ಕಸ ನಿರ್ವಹಣೆ, ಮೂಲ ಸೌಕರ್ಯ ಕಾಮಗಾರಿಗಳನ್ನು ಹಲವು ಗುತ್ತಿಗೆದಾರರು ನಿರ್ವಹಿದ್ದಾರೆ. ‘ಬಿಲ್ ಪಾವತಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಜೇಷ್ಠತೆ ಆಧಾರದಲ್ಲಿ ಬಿಡುಗಡೆ ಮಾಡಬೇಕಿದೆ. ಆದರೆ, ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ನಿಯಮಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಅವರು ದೂರಿದ್ದಾರೆ.