ಸಿಜಿಸಿ ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಹೊರಮಾವು ವಾರ್ಡ್ನಲ್ಲಿ ಒಳಚರಂಡಿ ಕೊಳವೆ ಅಳವಡಿಸಲು ಅಗೆದಿದ್ದ ರಸ್ತೆಗಳ ದುರಸ್ತಿಯ ಕಾಮಗಾರಿಗಳನ್ನು (ಎರಡು ಪ್ಯಾಕೇಜ್ಗಳು) ನಡೆಸಿತ್ತು. ಕಂಪನಿಯ ನಿರ್ದೇಶಕ ಸಿ.ಜಿ.ಚಂದ್ರಪ್ಪ ಅವರು ಕಾಮಗಾರಿಯ ₹ 4.43 ಕೋಟಿ ಬಿಲ್ಲನ್ನು ಹೆಣ್ಣೂರು ಮುಖ್ಯ ರಸ್ತೆಯಲ್ಲಿ ಯೂನಿಯನ್ ಬ್ಯಾಂಕ್ನ ಶಾಖೆಗೆ ಜಮೆ ಮಾಡುವಂತೆ ಕೋರಿದ್ದರು. ಆದರೆ, ಹಣಕಾಸು ವಿಭಾಗದ ಅಧಿಕಾರಿಗಳು ಈ ಖಾತೆಗೆ ಹಣ ಪಾವತಿಸುವ ಬದಲು ಹಂಪಿನಗರದ ಜನತಾ ಸೇವಾ ಕೋ–ಆಪರೇಟಿವ್ ಬ್ಯಾಂಕ್ನ ಶಾಖೆಯಲ್ಲಿ ಸಿ.ಜಿ.ಚಂದ್ರಪ್ಪ ಎಂಬ ಹೆಸರಿನ ಖಾತೆಗೆ ಫೆ 4ರಂದು ₹ 4.15 ಕೋಟಿ (ಕ್ರಮಬದ್ಧ ಕಡಿತದ ಬಳಿಕ) ಬಿಲ್ ಜಮೆ ಮಾಡಿದ್ದರು. ಈ ಬಗ್ಗೆ ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ಸಿ.ಜಿ.ಚಂದ್ರಪ್ಪ ಬುಧವಾರ ದೂರು ನೀಡಿದ್ದರು. ಆಯುಕ್ತರು ರಾಮ ಮೂರ್ತಿ, ಅನಿತಾ ಹಾಗೂ ರಾಘವೇಂದ್ರ ಅವರನ್ನು ಅಮಾನತು ಮಾಡಿದ್ದರು.