‘ಬಿಲ್ ಪಾವತಿಗೆ ಸಂಬಂಧಿಸಿದಂತೆ ಹಲವು ಹೊಸ ಪ್ರಕ್ರಿಯೆಗಳನ್ನು ಮುಖ್ಯ ಆಯುಕ್ತರು ಹೊರಡಿಸಿದ್ದರು. ಇದನ್ನು ಬದಲಿಸಲು ಕೋರಿ ಮೂರು ಬಾರಿ ಮನವಿ ಸಲ್ಲಿಸಿದ್ದೆವು. ಆ.30ರಂದು ನಮ್ಮೊಂದಿಗೆ ಚರ್ಚೆ ನಡೆಸಿ ಎಲ್ಲಾ ಬೇಡಿಕೆ ಈಡೇರಿಸುವ ಭರವಸೆಯನ್ನೂ ನೀಡಿದ್ದರು. ಆದರೆ, ಸೆ.14ರಂದು ಹೊರಡಿಸಿರುವ ಆದೇಶದಲ್ಲಿ ಇನ್ನಷ್ಟು ಹೊಸ ಅಂಶಗಳನ್ನು ಸೇರಿಸಿದ್ದಾರೆ. ಆದ್ದರಿಂದ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ’ ಎಂದು ಸಂಘದ ಅಧ್ಯಕ್ಷ ಅಂಬಿಕಾಪತಿ ತಿಳಿಸಿದರು.