ನಗರ ಭೂ ಸಾರಿಗೆ ಉಪಕರ ಸಂಗ್ರಹಿಸುವ ನಿರ್ಣಯಕ್ಕೆ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಬುಧವಾರ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತು. ಸಭೆಯ ಆರಂಭದಲ್ಲೇ ಈ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ‘ನಿನ್ನೆ ಸಭೆಯಲ್ಲಿ ತರಾತುರಿಯಲ್ಲಿ ನಿರ್ಣಯ ಮಂಡಿಸುವಾಗ ಈ ಪ್ರಸ್ತಾಪ ಮುಂದೂಡುವುದಾಗಿ ಹೇಳಿದ್ದಿರಿ. ಹೊರಗಡೆ ಮಾಧ್ಯಮದವರ ಬಳಿ ಸೆಸ್ ಸಂಗ್ರಹಿಸುವುದಾಗಿ ಹೇಳಿಕೆ ನೀಡಿದ್ದೀರಿ. ಈ ಗೊಂದಲವನ್ನು ಏಕೆ ಸೃಷ್ಟಿಸುತ್ತೀರಿ’ ಎಂದು ಮೇಯರ್ ಎಂ.ಗೌತಮ್ ಕುಮಾರ್ ಅವರನ್ನು ಪ್ರಶ್ನಿಸಿದರು.