<p><strong>ಬೆಂಗಳೂರು</strong>: ಜಕ್ಕೂರು ವಾರ್ಡ್ ವ್ಯಾಪ್ತಿಯ ಬೆಳ್ಳಹಳ್ಳಿ ವೃತ್ತಕ್ಕೆ ಇಟ್ಟಿದ್ದ ‘ಬೆಳ್ಳಹಳ್ಳಿ ಟಿಪ್ಪು ಸುಲ್ತಾನ್ ವೃತ್ತ’ ಎಂದು ನಾಮಕರಣ ಮಾಡಿರುವ ನಿರ್ಣಯವನ್ನು ರದ್ದುಪಡಿಸಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಮಂಗಳವಾರ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಈ ನಡೆಗೆ ವಿರೋಧ ಪಕ್ಷವಾದ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಿದೆ. ಪಾಲಿಕೆ ತೆಗೆದುಕೊಳ್ಳುವ ನಿರ್ಣಯಗಳ ಮಹತ್ವ ಇದರಿಂದ ಕಡಿಮೆಯಾಗಲಿದೆ. ಇದು ತುಘಲಕ್ ಸಂಸ್ಕೃತಿಯ ಪ್ರತೀಕ’ ಎಂದು ಅಬ್ದುಲ್ ವಾಜಿದ್ ಆರೋಪಿಸಿದರು.</p>.<p>‘ಸ್ಥಳೀಯರಿಂದ ಒತ್ತಾಯದ ಮೇರೆಗೆ ಈ ನಿರ್ಣಯ ಕೈಗೊಂಡಿದ್ದೇವೆ’ ಎಂದು ಮೇಯರ್ ಸಮರ್ಥಿಸಿಕೊಂಡರು.</p>.<p>ಕಾವೇರಿಪುರ ಬಡಾವಣೆಯ ಹೆರಿಗೆ ಆಸ್ಪತ್ರೆಗೆ ಹಾಗೂ 1ನೇ ಮುಖ್ಯ ರಸ್ತೆಗೆ ದಿವಂಗತ ರಮೀಳಾ ಉಮಾಶಂಕರ್ ಹೆಸರಿಡಲು ಹಾಗೂ ಪದ್ಮನಾಭ ನಗರ ವಾರ್ಡ್ನ ಸಮೃದ್ಧಿ ಬಡಾವಣೆ ಉದ್ಯಾನಕ್ಕೆ ಪೇಜಾವರ ವಿಶ್ವೇಶ ತೀರ್ಥರ ಹೆಸರಿಡಲು ನಿರ್ಣಯ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಕ್ಕೂರು ವಾರ್ಡ್ ವ್ಯಾಪ್ತಿಯ ಬೆಳ್ಳಹಳ್ಳಿ ವೃತ್ತಕ್ಕೆ ಇಟ್ಟಿದ್ದ ‘ಬೆಳ್ಳಹಳ್ಳಿ ಟಿಪ್ಪು ಸುಲ್ತಾನ್ ವೃತ್ತ’ ಎಂದು ನಾಮಕರಣ ಮಾಡಿರುವ ನಿರ್ಣಯವನ್ನು ರದ್ದುಪಡಿಸಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಮಂಗಳವಾರ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಈ ನಡೆಗೆ ವಿರೋಧ ಪಕ್ಷವಾದ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಿದೆ. ಪಾಲಿಕೆ ತೆಗೆದುಕೊಳ್ಳುವ ನಿರ್ಣಯಗಳ ಮಹತ್ವ ಇದರಿಂದ ಕಡಿಮೆಯಾಗಲಿದೆ. ಇದು ತುಘಲಕ್ ಸಂಸ್ಕೃತಿಯ ಪ್ರತೀಕ’ ಎಂದು ಅಬ್ದುಲ್ ವಾಜಿದ್ ಆರೋಪಿಸಿದರು.</p>.<p>‘ಸ್ಥಳೀಯರಿಂದ ಒತ್ತಾಯದ ಮೇರೆಗೆ ಈ ನಿರ್ಣಯ ಕೈಗೊಂಡಿದ್ದೇವೆ’ ಎಂದು ಮೇಯರ್ ಸಮರ್ಥಿಸಿಕೊಂಡರು.</p>.<p>ಕಾವೇರಿಪುರ ಬಡಾವಣೆಯ ಹೆರಿಗೆ ಆಸ್ಪತ್ರೆಗೆ ಹಾಗೂ 1ನೇ ಮುಖ್ಯ ರಸ್ತೆಗೆ ದಿವಂಗತ ರಮೀಳಾ ಉಮಾಶಂಕರ್ ಹೆಸರಿಡಲು ಹಾಗೂ ಪದ್ಮನಾಭ ನಗರ ವಾರ್ಡ್ನ ಸಮೃದ್ಧಿ ಬಡಾವಣೆ ಉದ್ಯಾನಕ್ಕೆ ಪೇಜಾವರ ವಿಶ್ವೇಶ ತೀರ್ಥರ ಹೆಸರಿಡಲು ನಿರ್ಣಯ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>