<p><strong>ಬೆಂಗಳೂರು:</strong> ಬಿಬಿಎಂಪಿಯ ಮಹದೇವಪುರ ವಲಯದ ವಾರ್ಡ್ಗಳಲ್ಲಿ ಕಳೆದ ಎರಡು ತಿಂಗಳಿನಿಂದ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.</p>.<p>ಕಳೆದ 10 ದಿನಗಳಲ್ಲಿ ನಗರದಲ್ಲಿ 3,808 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಬಿಬಿಎಂಪಿ ಹೇಳಿದೆ. ಈ ಪೈಕಿ, ಬೆಳ್ಳಂದೂರು, ಹಗದೂರು, ಶಾಂತಲಾನಗರ ಹಾಗೂ ಗಾಂಧಿನಗರ ವಾರ್ಡ್ಗಳಲ್ಲಿ ಹೆಚ್ಚು ಪ್ರಕರಣಗಳು ದೃಢ ಪಟ್ಟಿವೆ.</p>.<p>ಮಹದೇವಪುರ ವಲಯದಲ್ಲಿ ಕಳೆದ ನವೆಂಬರ್ನಿಂದಲೂ ಅತಿಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿವೆ. ಈ ವಲಯದಲ್ಲಿ 450ರಿಂದ 500 ಅಪಾರ್ಟ್ಮೆಂಟ್ಗಳಿದ್ದು, ‘ಕ್ಲಸ್ಟರ್ ಸೋಂಕು’ ಹೆಚ್ಚು ವರದಿಯಾಗಿವೆ. ಕೇರಳದ ಸಂಪರ್ಕದ ಕಾರಣ ಪ್ರಕರಣಗಳು ಇಲ್ಲಿ ಹೆಚ್ಚಾಗುತ್ತಿವೆ ಎಂದು ವಲಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮಾಲ್ಗಳು, ಚಲನಚಿತ್ರ ಮಂದಿರಗಳು ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಸಂಸ್ಥೆ–ಸ್ಥಳಗಳಲ್ಲಿ ಸಂಚಾರ ಮುಕ್ತವಾಗಿದೆ. ಈ ಪ್ರದೇಶಗಳಲ್ಲಿ ಅಂತರ ನಿಯಮ ಪಾಲಿಸಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದರು.</p>.<p>ಈ ವಲಯದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದರೂ, ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ಹಾಕಿದ್ದ ದಂಡದ ಪ್ರಮಾಣ ತೀರಾ ಕಡಿಮೆ ಇದೆ. ಮಾಸ್ಕ್ ಹಾಕದೆ ಅಥವಾ ಅಂತರ ಕಾಪಾಡಿಕೊಳ್ಳದ ಕಾರಣ ದಂಡ ವಿಧಿಸಿದ ಪ್ರಕರಣಗಳ ಸಂಖ್ಯೆ ಈ ವಲಯದಲ್ಲಿ ಶೇ 0.35ನಷ್ಟಿದ್ದರೆ, ಬೊಮ್ಮನಹಳ್ಳಿ ವಲಯದಲ್ಲಿ ಶೇ 1.81ರಷ್ಟು ಇದೆ.</p>.<p>‘ದೇವಸ್ಥಾನಗಳಲ್ಲಿ, ಮದುವೆ ಸಮಾರಂಭಗಳಲ್ಲಿ ಅಂತರ ಕಾಪಾಡಿಕೊಳ್ಳದ ಹಾಗೂ ಮಾಸ್ಕ್ ಧರಿಸದ ಪ್ರಕರಣಗಳ ಪ್ರಮಾಣ ಶೇ 80ಕ್ಕೂ ಹೆಚ್ಚಿದೆ. ಆದರೆ, ಇಲ್ಲಿ ಸೇರಬೇಕಾದ ಜನರ ಗರಿಷ್ಠ ಸಂಖ್ಯೆ ಎಷ್ಟಿರಬೇಕು ಎಂಬುದನ್ನು ಖಚಿತವಾಗಿ ಹೇಳಿರದ ಕಾರಣ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವುದು ಕಷ್ಟವಾಗುತ್ತಿದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಶಾಂತಲಾ ನಗರ ವಾರ್ಡ್ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ನಮ್ಮ ಕ್ಷೇತ್ರದಲ್ಲಿ ಜನ ಆತಂಕ ಪಡುವ ಅಗತ್ಯವೂ ಇಲ್ಲ’ ಎಂದು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯ ಮಹದೇವಪುರ ವಲಯದ ವಾರ್ಡ್ಗಳಲ್ಲಿ ಕಳೆದ ಎರಡು ತಿಂಗಳಿನಿಂದ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.</p>.<p>ಕಳೆದ 10 ದಿನಗಳಲ್ಲಿ ನಗರದಲ್ಲಿ 3,808 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಬಿಬಿಎಂಪಿ ಹೇಳಿದೆ. ಈ ಪೈಕಿ, ಬೆಳ್ಳಂದೂರು, ಹಗದೂರು, ಶಾಂತಲಾನಗರ ಹಾಗೂ ಗಾಂಧಿನಗರ ವಾರ್ಡ್ಗಳಲ್ಲಿ ಹೆಚ್ಚು ಪ್ರಕರಣಗಳು ದೃಢ ಪಟ್ಟಿವೆ.</p>.<p>ಮಹದೇವಪುರ ವಲಯದಲ್ಲಿ ಕಳೆದ ನವೆಂಬರ್ನಿಂದಲೂ ಅತಿಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿವೆ. ಈ ವಲಯದಲ್ಲಿ 450ರಿಂದ 500 ಅಪಾರ್ಟ್ಮೆಂಟ್ಗಳಿದ್ದು, ‘ಕ್ಲಸ್ಟರ್ ಸೋಂಕು’ ಹೆಚ್ಚು ವರದಿಯಾಗಿವೆ. ಕೇರಳದ ಸಂಪರ್ಕದ ಕಾರಣ ಪ್ರಕರಣಗಳು ಇಲ್ಲಿ ಹೆಚ್ಚಾಗುತ್ತಿವೆ ಎಂದು ವಲಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮಾಲ್ಗಳು, ಚಲನಚಿತ್ರ ಮಂದಿರಗಳು ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಸಂಸ್ಥೆ–ಸ್ಥಳಗಳಲ್ಲಿ ಸಂಚಾರ ಮುಕ್ತವಾಗಿದೆ. ಈ ಪ್ರದೇಶಗಳಲ್ಲಿ ಅಂತರ ನಿಯಮ ಪಾಲಿಸಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದರು.</p>.<p>ಈ ವಲಯದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದರೂ, ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ಹಾಕಿದ್ದ ದಂಡದ ಪ್ರಮಾಣ ತೀರಾ ಕಡಿಮೆ ಇದೆ. ಮಾಸ್ಕ್ ಹಾಕದೆ ಅಥವಾ ಅಂತರ ಕಾಪಾಡಿಕೊಳ್ಳದ ಕಾರಣ ದಂಡ ವಿಧಿಸಿದ ಪ್ರಕರಣಗಳ ಸಂಖ್ಯೆ ಈ ವಲಯದಲ್ಲಿ ಶೇ 0.35ನಷ್ಟಿದ್ದರೆ, ಬೊಮ್ಮನಹಳ್ಳಿ ವಲಯದಲ್ಲಿ ಶೇ 1.81ರಷ್ಟು ಇದೆ.</p>.<p>‘ದೇವಸ್ಥಾನಗಳಲ್ಲಿ, ಮದುವೆ ಸಮಾರಂಭಗಳಲ್ಲಿ ಅಂತರ ಕಾಪಾಡಿಕೊಳ್ಳದ ಹಾಗೂ ಮಾಸ್ಕ್ ಧರಿಸದ ಪ್ರಕರಣಗಳ ಪ್ರಮಾಣ ಶೇ 80ಕ್ಕೂ ಹೆಚ್ಚಿದೆ. ಆದರೆ, ಇಲ್ಲಿ ಸೇರಬೇಕಾದ ಜನರ ಗರಿಷ್ಠ ಸಂಖ್ಯೆ ಎಷ್ಟಿರಬೇಕು ಎಂಬುದನ್ನು ಖಚಿತವಾಗಿ ಹೇಳಿರದ ಕಾರಣ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವುದು ಕಷ್ಟವಾಗುತ್ತಿದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಶಾಂತಲಾ ನಗರ ವಾರ್ಡ್ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ನಮ್ಮ ಕ್ಷೇತ್ರದಲ್ಲಿ ಜನ ಆತಂಕ ಪಡುವ ಅಗತ್ಯವೂ ಇಲ್ಲ’ ಎಂದು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>