<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ಗೆ ಒಳಗಾಗಿ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಅಥವಾ ಆರೈಕೆಯಲ್ಲಿದ್ದವರ ಪೈಕಿ ಮೇ ತಿಂಗಳಲ್ಲಿ 778 ಮಂದಿ ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ ರಚಿಸಿರುವ ಸಾವು ವಿಶ್ಲೇಷಣಾ ಸಮಿತಿ (ಡೆತ್ ಅನಾಲಿಸಿಸ್ ಕಮಿಟಿ) ವರದಿ ನೀಡಿದೆ.</p>.<p>ಆದರೆ, ಸಮಿತಿಯ ಈ ವರದಿಯ ಅಂಕಿ–ಅಂಶಗಳ ಸ್ಪಷ್ಟ ಮಾಹಿತಿ ಬೇಕಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಸಮಿತಿಗೆ ಸೂಚನೆ ನೀಡಿದ್ದಾರೆ.</p>.<p>’ಕೋವಿಡ್ನಿಂದ ಸಾವನ್ನಪ್ಪುವ ಪ್ರಮಾಣವನ್ನು ತಗ್ಗಿಸುವುದು ಹಾಗೂ ಸೋಂಕಿನಿಂದ ಯಾರೂ ಸಾವನ್ನಪ್ಪದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸಮಿತಿ ರಚನೆಯ ಉದ್ದೇಶ‘ ಎಂದೂ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>’ಮನೆಯಲ್ಲಿ ಆರೈಕೆ ಪಡೆದುಕೊಳ್ಳುತ್ತಿದ್ದವರು ಯಾವ ಕಾರಣದಿಂದ ಸಾವಿಗೀಡಾಗಿದ್ದಾರೆ ಎನ್ನುವ ಬಗ್ಗೆ ಸಮಿತಿಯು ವಿಸ್ತೃತ ವರದಿ ನೀಡಲಿದ್ದು, ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<p><strong>ವಿಶೇಷ ಅಧಿಕಾರಿ ನೇಮಕ</strong></p>.<p>’ನಗರದಲ್ಲಿ ಸೋಂಕು ದೃಢಪಟ್ಟು, ರೋಗಿಯು ಗುಣಮುಖರಾದ ಮೇಲೆ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ಉದ್ದೇಶದಿಂದ ಸರ್ಕಾರ ವಿಶೇಷ ಅಧಿಕಾರಿಯನ್ನು ನೇಮಿಸಿದೆ. ಗುಣಮುಖರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದ್ದು, ಇದರಲ್ಲಿ ಯಾವುದೇ ಸಮಸ್ಯೆ ಆಗಿಲ್ಲ‘ ಎಂದೂ ಹೇಳಿದರು.</p>.<p>‘ಯಾವ ವಯೋಮಾನದವರಿಗೆ ಮೂರನೇ ಅಲೆಯಲ್ಲಿ ಸಮಸ್ಯೆ ಆಗಲಿದೆ, ಇದನ್ನು ತಡೆಯುವುದು ಹೇಗೆ ಎನ್ನುವ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದ್ದು, ಸರ್ಕಾರದ ನಿರ್ದೇಶನ ಅನುಸಾರ ಪಾಲಿಕೆಯ ಹಂತದಲ್ಲಿ ಕ್ರಮ ವಹಿಸಲಾಗುವುದು. ಇನ್ನು ನಗರದಲ್ಲಿ ಅವಶ್ಯಕತೆಗೆ ಬೇಕಾದಷ್ಟು ಕೋವಿಡ್ ಲಸಿಕೆ ಇದೆ‘ ಎಂದು ಆಯುಕ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ಗೆ ಒಳಗಾಗಿ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಅಥವಾ ಆರೈಕೆಯಲ್ಲಿದ್ದವರ ಪೈಕಿ ಮೇ ತಿಂಗಳಲ್ಲಿ 778 ಮಂದಿ ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ ರಚಿಸಿರುವ ಸಾವು ವಿಶ್ಲೇಷಣಾ ಸಮಿತಿ (ಡೆತ್ ಅನಾಲಿಸಿಸ್ ಕಮಿಟಿ) ವರದಿ ನೀಡಿದೆ.</p>.<p>ಆದರೆ, ಸಮಿತಿಯ ಈ ವರದಿಯ ಅಂಕಿ–ಅಂಶಗಳ ಸ್ಪಷ್ಟ ಮಾಹಿತಿ ಬೇಕಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಸಮಿತಿಗೆ ಸೂಚನೆ ನೀಡಿದ್ದಾರೆ.</p>.<p>’ಕೋವಿಡ್ನಿಂದ ಸಾವನ್ನಪ್ಪುವ ಪ್ರಮಾಣವನ್ನು ತಗ್ಗಿಸುವುದು ಹಾಗೂ ಸೋಂಕಿನಿಂದ ಯಾರೂ ಸಾವನ್ನಪ್ಪದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸಮಿತಿ ರಚನೆಯ ಉದ್ದೇಶ‘ ಎಂದೂ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>’ಮನೆಯಲ್ಲಿ ಆರೈಕೆ ಪಡೆದುಕೊಳ್ಳುತ್ತಿದ್ದವರು ಯಾವ ಕಾರಣದಿಂದ ಸಾವಿಗೀಡಾಗಿದ್ದಾರೆ ಎನ್ನುವ ಬಗ್ಗೆ ಸಮಿತಿಯು ವಿಸ್ತೃತ ವರದಿ ನೀಡಲಿದ್ದು, ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<p><strong>ವಿಶೇಷ ಅಧಿಕಾರಿ ನೇಮಕ</strong></p>.<p>’ನಗರದಲ್ಲಿ ಸೋಂಕು ದೃಢಪಟ್ಟು, ರೋಗಿಯು ಗುಣಮುಖರಾದ ಮೇಲೆ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ಉದ್ದೇಶದಿಂದ ಸರ್ಕಾರ ವಿಶೇಷ ಅಧಿಕಾರಿಯನ್ನು ನೇಮಿಸಿದೆ. ಗುಣಮುಖರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದ್ದು, ಇದರಲ್ಲಿ ಯಾವುದೇ ಸಮಸ್ಯೆ ಆಗಿಲ್ಲ‘ ಎಂದೂ ಹೇಳಿದರು.</p>.<p>‘ಯಾವ ವಯೋಮಾನದವರಿಗೆ ಮೂರನೇ ಅಲೆಯಲ್ಲಿ ಸಮಸ್ಯೆ ಆಗಲಿದೆ, ಇದನ್ನು ತಡೆಯುವುದು ಹೇಗೆ ಎನ್ನುವ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದ್ದು, ಸರ್ಕಾರದ ನಿರ್ದೇಶನ ಅನುಸಾರ ಪಾಲಿಕೆಯ ಹಂತದಲ್ಲಿ ಕ್ರಮ ವಹಿಸಲಾಗುವುದು. ಇನ್ನು ನಗರದಲ್ಲಿ ಅವಶ್ಯಕತೆಗೆ ಬೇಕಾದಷ್ಟು ಕೋವಿಡ್ ಲಸಿಕೆ ಇದೆ‘ ಎಂದು ಆಯುಕ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>