<p><strong>ಬೆಂಗಳೂರು:</strong> ಕೋವಿಡ್ ಪರೀಕ್ಷೆ ಮತ್ತು ಸೋಂಕು ನಿಯಂತ್ರಣಕ್ಕೆ ನಗರದ ವಿವಿಧ ಕಾಲೇಜುಗಳ 994 ಅರೆ ವೈದ್ಯಕೀಯ ಕೋರ್ಸ್ಗಳ ವಿದ್ಯಾರ್ಥಿಗಳನ್ನು ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.</p>.<p>ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಈ ಕುರಿತು ಆದೇಶ ಮಾಡಿದ್ದಾರೆ. ಅರೆ ವೈದ್ಯಕೀಯ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ಕೆ ಪಾಲಿಕೆ ತಿಂಗಳಿಗೆ ₹20 ಸಾವಿರ ಗೌರವಧನ ನೀಡಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಧೀನದ 21 ಕಾಲೇಜುಗಳ ವಿದ್ಯಾರ್ಥಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರಿಗೆ ಆಯುಕ್ತರು ಸೂಚಿಸಿದ್ದಾರೆ.</p>.<p>ಕೋವಿಡ್ ಪರೀಕ್ಷೆ ನಡೆಸಲು ವಿವಿಧ ವಾರ್ಡ್ಗಳಲ್ಲಿ ಜನರ ಗಂಟಲ ದ್ರವದ ಮಾದರಿ ಸಂಗ್ರಹ ಕಾರ್ಯಕ್ಕೆ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಒದಗಿಸುವಂತೆ ಆಯುಕ್ತರು ರಾಜ್ಯ ಎನ್ಎಸ್ಎಸ್ ಅಧಿಕಾರಿಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳಿಗೆ ತಿಂಗಳಿಗೆ ₹14 ಸಾವಿರ ಗೌರವಧನ ನೀಡಲಾಗುವುದು. ಅವರನ್ನು ಕರೆದೊಯ್ಯಲು ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪರೀಕ್ಷೆ ಮತ್ತು ಸೋಂಕು ನಿಯಂತ್ರಣಕ್ಕೆ ನಗರದ ವಿವಿಧ ಕಾಲೇಜುಗಳ 994 ಅರೆ ವೈದ್ಯಕೀಯ ಕೋರ್ಸ್ಗಳ ವಿದ್ಯಾರ್ಥಿಗಳನ್ನು ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.</p>.<p>ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಈ ಕುರಿತು ಆದೇಶ ಮಾಡಿದ್ದಾರೆ. ಅರೆ ವೈದ್ಯಕೀಯ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ಕೆ ಪಾಲಿಕೆ ತಿಂಗಳಿಗೆ ₹20 ಸಾವಿರ ಗೌರವಧನ ನೀಡಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಧೀನದ 21 ಕಾಲೇಜುಗಳ ವಿದ್ಯಾರ್ಥಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರಿಗೆ ಆಯುಕ್ತರು ಸೂಚಿಸಿದ್ದಾರೆ.</p>.<p>ಕೋವಿಡ್ ಪರೀಕ್ಷೆ ನಡೆಸಲು ವಿವಿಧ ವಾರ್ಡ್ಗಳಲ್ಲಿ ಜನರ ಗಂಟಲ ದ್ರವದ ಮಾದರಿ ಸಂಗ್ರಹ ಕಾರ್ಯಕ್ಕೆ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಒದಗಿಸುವಂತೆ ಆಯುಕ್ತರು ರಾಜ್ಯ ಎನ್ಎಸ್ಎಸ್ ಅಧಿಕಾರಿಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳಿಗೆ ತಿಂಗಳಿಗೆ ₹14 ಸಾವಿರ ಗೌರವಧನ ನೀಡಲಾಗುವುದು. ಅವರನ್ನು ಕರೆದೊಯ್ಯಲು ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>