<p><strong>ಬೆಂಗಳೂರು: </strong>ಹಾಸಿಗೆ ಬ್ಲಾಕಿಂಗ್ ಜಾಲದ ತನಿಖೆ ನಡೆಸುತ್ತಿರುವ ಪೊಲೀಸರ ತಂಡದಲ್ಲಿ ಸೈಬರ್ ತಜ್ಞರು ಇದ್ದಾರೆಯೇ ಎಂಬುದನ್ನು ಖಚಿತಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೋವಿಡ್ ಕುರಿತ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ತನಿಖೆಯ ಸ್ಥಿತಿಗತಿ ಕುರಿತ ವರದಿ ಸಲ್ಲಿಸುವಂತೆ ಸಿಸಿಬಿ ಜಂಟಿ ಕಮಿಷನರ್ಗೆ ಸೂಚನೆ ನೀಡಿತು.</p>.<p>‘ಆರೋಪಗಳ ಸೂಕ್ಷ್ಮ ಸ್ವರೂಪವನ್ನು ಗಮನಿಸಿದರೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತನಿಖೆಯ ಮೇಲ್ವಿಚಾರಣೆ ವಹಿಸುವುದು ಅವಶ್ಯಕ. ಸೈಬರ್ ಕ್ಷೇತ್ರದಲ್ಲಿ ಪರಿಣಿತಿ ಇರುವ ಅಧಿಕಾರಿಗಳನ್ನು ತನಿಖಾ ತಂಡದಲ್ಲಿ ಒಳಗೊಳ್ಳುವುದೂ ಅಗತ್ಯ’ ಎಂದು ಪೀಠ ಹೇಳಿತು.</p>.<p>‘ಈಗಾಗಲೇ ತಂಡ ರಚನೆ ಮಾಡಲಾಗಿದೆ. ಜಂಟಿ ಕಮಿಷನರ್ (ಅಪರಾಧ) ಸಂದೀಪ್ ಪಾಟೀಲ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಅಡ್ವೊಕೇಟ್ ಜನರಲ್ ಪೀಠಕ್ಕೆ ಮಹಿತಿ ನೀಡಿದರು.</p>.<p>ಅಮಾನತುಗೊಂಡಿರುವ ಬಿಬಿಎಂಪಿ ವಾರ್ ರೂಂ ಉದ್ಯೋಗಿಗಳಿಗೆ ಅನ್ಯಾಯವಾಗಿದೆ ಎಂಬ ಯುವ ಕಾಂಗ್ರೆಸ್ ಮುಖಂಡ ವೈ.ಬಿ. ಶ್ರೀವತ್ಸ ಅವರ ಅರ್ಜಿಯನ್ನು ಪುರಸ್ಕರಿಸಲು ಪೀಠ ನಿರಾಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಾಸಿಗೆ ಬ್ಲಾಕಿಂಗ್ ಜಾಲದ ತನಿಖೆ ನಡೆಸುತ್ತಿರುವ ಪೊಲೀಸರ ತಂಡದಲ್ಲಿ ಸೈಬರ್ ತಜ್ಞರು ಇದ್ದಾರೆಯೇ ಎಂಬುದನ್ನು ಖಚಿತಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೋವಿಡ್ ಕುರಿತ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ತನಿಖೆಯ ಸ್ಥಿತಿಗತಿ ಕುರಿತ ವರದಿ ಸಲ್ಲಿಸುವಂತೆ ಸಿಸಿಬಿ ಜಂಟಿ ಕಮಿಷನರ್ಗೆ ಸೂಚನೆ ನೀಡಿತು.</p>.<p>‘ಆರೋಪಗಳ ಸೂಕ್ಷ್ಮ ಸ್ವರೂಪವನ್ನು ಗಮನಿಸಿದರೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತನಿಖೆಯ ಮೇಲ್ವಿಚಾರಣೆ ವಹಿಸುವುದು ಅವಶ್ಯಕ. ಸೈಬರ್ ಕ್ಷೇತ್ರದಲ್ಲಿ ಪರಿಣಿತಿ ಇರುವ ಅಧಿಕಾರಿಗಳನ್ನು ತನಿಖಾ ತಂಡದಲ್ಲಿ ಒಳಗೊಳ್ಳುವುದೂ ಅಗತ್ಯ’ ಎಂದು ಪೀಠ ಹೇಳಿತು.</p>.<p>‘ಈಗಾಗಲೇ ತಂಡ ರಚನೆ ಮಾಡಲಾಗಿದೆ. ಜಂಟಿ ಕಮಿಷನರ್ (ಅಪರಾಧ) ಸಂದೀಪ್ ಪಾಟೀಲ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಅಡ್ವೊಕೇಟ್ ಜನರಲ್ ಪೀಠಕ್ಕೆ ಮಹಿತಿ ನೀಡಿದರು.</p>.<p>ಅಮಾನತುಗೊಂಡಿರುವ ಬಿಬಿಎಂಪಿ ವಾರ್ ರೂಂ ಉದ್ಯೋಗಿಗಳಿಗೆ ಅನ್ಯಾಯವಾಗಿದೆ ಎಂಬ ಯುವ ಕಾಂಗ್ರೆಸ್ ಮುಖಂಡ ವೈ.ಬಿ. ಶ್ರೀವತ್ಸ ಅವರ ಅರ್ಜಿಯನ್ನು ಪುರಸ್ಕರಿಸಲು ಪೀಠ ನಿರಾಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>