<p><strong>ಬೆಂಗಳೂರು: </strong>ಹಾಸಿಗೆ ಬ್ಲಾಕಿಂಗ್ ದಂಧೆಯ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಸಪ್ತಗಿರಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಆಂಥೋನಿ ಬಂಧಿತ ಆರೋಪಿ.</p>.<p>ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಸಿಗೆ ಹಂಚಿಕೆ ಮಾಡುವುದಾಗಿ ಹೇಳಿ ಹೆಚ್ಚು ಹಣ ಪಡೆಯುತ್ತಿದ್ದ. ವಿಚಾರಣೆ ವೇಳೆ ಅಧಿಕಾರಿಗಳಿಗೆ ಈ ಮಾಹಿತಿ ಲಭ್ಯವಾಗಿತ್ತು, ಇದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುತ್ತಿದ್ದ ಆರೋಪದಡಿ ನಗರದ ಕೆಲ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದರು.</p>.<p>ಇತ್ತೀಚೆಗಷ್ಟೇ ‘ಆರೋಗ್ಯ ಮಿತ್ರ’ ಅಧಿಕಾರಿ ಶಶಿಧರ್, ರಾಜರಾಜೇಶ್ವರಿ ನಗರದ ಸ್ಪರ್ಶ ಆಸ್ಪತ್ರೆ ನೌಕರ ವೆಂಕೋಬ ರಾವ್ ಹಾಗೂ ಬಸವೇಶ್ವರನಗರದ ಪುಣ್ಯ ಆಸ್ಪತ್ರೆ ನೌಕರ ಸುಧೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು.</p>.<p>ಇವರು ನೀಡಿದ್ದ ಮಾಹಿತಿ ಆಧರಿಸಿ, ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಬಳಿಕ ಹಲವರನ್ನು ಮಂಗಳವಾರ ವಿಚಾರಣೆ ನಡೆಸಿದ್ದರು. ಈವರೆಗೆ ಈ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಾಸಿಗೆ ಬ್ಲಾಕಿಂಗ್ ದಂಧೆಯ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಸಪ್ತಗಿರಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಆಂಥೋನಿ ಬಂಧಿತ ಆರೋಪಿ.</p>.<p>ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಸಿಗೆ ಹಂಚಿಕೆ ಮಾಡುವುದಾಗಿ ಹೇಳಿ ಹೆಚ್ಚು ಹಣ ಪಡೆಯುತ್ತಿದ್ದ. ವಿಚಾರಣೆ ವೇಳೆ ಅಧಿಕಾರಿಗಳಿಗೆ ಈ ಮಾಹಿತಿ ಲಭ್ಯವಾಗಿತ್ತು, ಇದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುತ್ತಿದ್ದ ಆರೋಪದಡಿ ನಗರದ ಕೆಲ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದರು.</p>.<p>ಇತ್ತೀಚೆಗಷ್ಟೇ ‘ಆರೋಗ್ಯ ಮಿತ್ರ’ ಅಧಿಕಾರಿ ಶಶಿಧರ್, ರಾಜರಾಜೇಶ್ವರಿ ನಗರದ ಸ್ಪರ್ಶ ಆಸ್ಪತ್ರೆ ನೌಕರ ವೆಂಕೋಬ ರಾವ್ ಹಾಗೂ ಬಸವೇಶ್ವರನಗರದ ಪುಣ್ಯ ಆಸ್ಪತ್ರೆ ನೌಕರ ಸುಧೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು.</p>.<p>ಇವರು ನೀಡಿದ್ದ ಮಾಹಿತಿ ಆಧರಿಸಿ, ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಬಳಿಕ ಹಲವರನ್ನು ಮಂಗಳವಾರ ವಿಚಾರಣೆ ನಡೆಸಿದ್ದರು. ಈವರೆಗೆ ಈ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>