‘ಆಡಳಿತದಲ್ಲಿ ವಿಕೇಂದ್ರೀಕರಣವನ್ನು ಸ್ವಾಗತಿಸಬೇಕು. ಆದರೆ, ಇಲ್ಲಿ ಹಿತಾಸಕ್ತಿ ಸಂಘರ್ಷವೂ ಇರುವ ಸಾಧ್ಯತೆ ಇದೆ. ಬಿಬಿಎಂಪಿ ಡಿಸಿಎಫ್ ಅವರು ಮುಖ್ಯ ಆಯುಕ್ತರಿಗೆ ವರದಿ ಮಾಡಿಕೊಳ್ಳಬೇಕು. ಮುಖ್ಯ ಆಯುಕ್ತರ ಉಸ್ತುವಾರಿಯಲ್ಲೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ. ಆದ್ದರಿಂದ, ಈ ಬದಲಾವಣೆ ಯಾವ ರೀತಿಯಲ್ಲಿ ಕೈಗೊಳ್ಳಲಾಗುತ್ತದೆ ಎನ್ನುವುದು ಸಹ ಮುಖ್ಯ’ ಎಂದು ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ಪ್ರತಿಕ್ರಿಯಿಸಿದ್ದಾರೆ.