ವಿವಿ ವಿದ್ಯಾರ್ಥಿನಿಲಯಗಳು, ಎಂಜಿನಿಯರಿಂಗ್, ಸ್ನಾತಕೋತ್ತರ ವಿಭಾಗ ಹಾಗೂ ಆಡಳಿತ ವಿಭಾಗದಿಂದ ಹೆಚ್ಚಿನ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಇದು ‘ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕ’ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ವಿವಿ ಆವರಣದಲ್ಲೇ ತ್ಯಾಜ್ಯ ಸಂಸ್ಕರಿಸಲು, ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು 2022ರ ಮಾರ್ಚ್ನಲ್ಲಿ ರಾಜರಾಜೇಶ್ವರಿ ವಲಯದ ಜಂಟಿ ಆಯುಕ್ತರು ಸೂಚಿಸಿದ್ದರು. ‘ಇದ್ಯಾವುದೂ ಇಂದಿಗೂ ಪಾಲನೆ ಆಗಿಲ್ಲ. ಈ ಎಲ್ಲ ಅಂಶಗಳ ವರದಿ ಆಧಾರದ ಮೇಲೆ ವಿವಿ ಆವರಣದಲ್ಲಿ ಕಸ ಸಂಗ್ರಹಿಸುವುದನ್ನು ನಿಲ್ಲಿಸುತ್ತೇವೆ’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.