‘ಪೂರ್ವ ವಲಯದಲ್ಲಿ ಟೋಟಲ್ ಸ್ಟೇಷನ್ ಸರ್ವೆ ನಡೆಸಿದ್ದರು. ದೊಮ್ಮಲೂರು ಸಸ್ಕೆನ್ ಟೆಕ್ನಾಲಜಿ, ಅಶೋಕ ಹೋಟೆಲ್, ಎ.ಎಸ್.ಕೆ. ಬ್ರದರ್ಸ್, ರಾಯಲ್ ಟರ್ಜಿಡ್, ಒಬೆರಾಯ್ ಸಂಸ್ಥೆ, ಶ್ರೀರಾಮ್ ಲೀಲಾ ಡೆವಲಪರ್ಸ್, ಈಸ್ಟ್ವೆಸ್ಟ್ ಹೋಟೆಲ್ ಮತ್ತು ಎಲೇಕ್ಸೈರ್ ಎಂಟರ್ ಸಂಸ್ಥೆಗಳ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಿದ್ದಾರೆ. ಆ ಮೂಲಕ ಪಾಲಿಕೆಯ ಬೊಕ್ಕಸಕ್ಕೆ ₹63 ಕೋಟಿ ನಷ್ಟ ಉಂಟು ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲು ಬಿಬಿಎಂಪಿ ಹೆಚ್ಚುವರಿ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.