ಕೆ.ಆರ್. ಪುರದಲ್ಲಿ ಹೂಡಿ ಅಯ್ಯಪ್ಪನಗರ ಮುಖ್ಯರಸ್ತೆಯಲ್ಲಿ ದೊಡ್ಡ ಗುಂಡಿಯನ್ನು ತೆಗೆದು, ಮುಚ್ಚದೆ ಬಿಡಲಾಗಿತ್ತು. ಇದರಿಂದ ಗುರುವಾರ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಪೊಲೀಸರು ಮಹದೇವಪುರ ವಲಯದ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ ಸೇರಿ ಎಲ್ಲರನ್ನೂ ಸಂಪರ್ಕಿಸಲು ಪ್ರಯತ್ನಿಸಿದರು. ಯಾರೂ ಸಿಕ್ಕಿಲ್ಲ. ಹೀಗಾಗಿ ಸಂಚಾರಕ್ಕೆ ಅನುವಾಗಲು ಜೆಸಿಬಿ ತರಿಸಿ ಗುಂಡಿ ಮುಚ್ಚಿದ್ದಾರೆ.