<p><strong>ಬೆಂಗಳೂರು</strong>: ಅನಧಿಕೃತವಾಗಿ ವಿದ್ಯುತ್ ಕಂಬ, ಮರಗಳು ಮತ್ತು ಕಟ್ಟಡಗಳ ಮೇಲ್ಭಾಗ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ಸಿ ಕೇಬಲ್ಗಳನ್ನು ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥಪ್ರಸಾದ್ ತಿಳಿಸಿದರು.</p>.<p>‘ಅನಧಿಕೃತ ಟಿ.ವಿ ಕೇಬಲ್ ಮತ್ತು ಇಂಟರ್ನೆಟ್ ಕೇಬಲ್ಗಳನ್ನು ಕೂಡಲೇ ಗುರುತಿಸಬೇಕು’ ಎಂದು ಎಲ್ಲಾ ವಲಯದ ಮುಖ್ಯ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.</p>.<p>‘ಕೇಬಲ್ ಅಳವಡಿಸಲು ಅನುಮತಿ ಪಡೆದಿದ್ದರೆ ಅದರ ಪತ್ರ ಪರಿಶೀಲಿಸಿ ನಿಯಮಾನುಸಾರ ಕೇಬಲ್ಗಳನ್ನು ಅಳವಡಿಸಿಕೊಳ್ಳಲು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಕೇಬಲ್ ಅಳವಡಿಸಲು ಪಾಲಿಕೆಯಿಂದ ಅನುಮತಿ ಪಡೆಯದಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಪಾದಚಾರಿ ಮಾರ್ಗದಲ್ಲಿ ಎಲ್ಲೆಂದರಲ್ಲಿ ಅನಧಿಕೃತವಾಗಿ ಒಎಫ್ಸಿ ಕೇಬಲ್ಗಳನ್ನು ಅಳವಡಿಸಲಾಗಿದೆ. ಇದರಿಂದ ಪಾದಚಾರಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪಾದಚಾರಿ ಮಾರ್ಗಗಳಲ್ಲಿ ಕೇಬಲ್ಗಳಿದ್ದರೆ ಕೂಡಲೆ ತೆರವುಗೊಳಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಹೈ ಟೆನ್ಷನ್ ಲೈನ್ ಕೆಳಗೆ ಅನಧಿಕೃತವಾಗಿ ಕಟ್ಟಡ ಅಥವಾ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಸಂಬಂಧ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಬೆಸ್ಕಾಂನಿಂದ ನೋಟಿಸ್ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. 15 ದಿನಗಳಲ್ಲಿ ಸ್ವಯಂ ತೆರವುಗೊಳಿಸಲು ಸೂಚನೆ ನೀಡಬೆಕು. ತೆರವಾಗದಿದ್ದರೆ ಪೊಲೀಸ್ ಭದ್ರತೆಯೊಂದಿಗೆ ಕಟ್ಟಡ ತೆರವುಗೊಳಿಸಿ ಅದರ ವೆಚ್ಚವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅನಧಿಕೃತವಾಗಿ ವಿದ್ಯುತ್ ಕಂಬ, ಮರಗಳು ಮತ್ತು ಕಟ್ಟಡಗಳ ಮೇಲ್ಭಾಗ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ಸಿ ಕೇಬಲ್ಗಳನ್ನು ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥಪ್ರಸಾದ್ ತಿಳಿಸಿದರು.</p>.<p>‘ಅನಧಿಕೃತ ಟಿ.ವಿ ಕೇಬಲ್ ಮತ್ತು ಇಂಟರ್ನೆಟ್ ಕೇಬಲ್ಗಳನ್ನು ಕೂಡಲೇ ಗುರುತಿಸಬೇಕು’ ಎಂದು ಎಲ್ಲಾ ವಲಯದ ಮುಖ್ಯ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.</p>.<p>‘ಕೇಬಲ್ ಅಳವಡಿಸಲು ಅನುಮತಿ ಪಡೆದಿದ್ದರೆ ಅದರ ಪತ್ರ ಪರಿಶೀಲಿಸಿ ನಿಯಮಾನುಸಾರ ಕೇಬಲ್ಗಳನ್ನು ಅಳವಡಿಸಿಕೊಳ್ಳಲು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಕೇಬಲ್ ಅಳವಡಿಸಲು ಪಾಲಿಕೆಯಿಂದ ಅನುಮತಿ ಪಡೆಯದಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಪಾದಚಾರಿ ಮಾರ್ಗದಲ್ಲಿ ಎಲ್ಲೆಂದರಲ್ಲಿ ಅನಧಿಕೃತವಾಗಿ ಒಎಫ್ಸಿ ಕೇಬಲ್ಗಳನ್ನು ಅಳವಡಿಸಲಾಗಿದೆ. ಇದರಿಂದ ಪಾದಚಾರಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪಾದಚಾರಿ ಮಾರ್ಗಗಳಲ್ಲಿ ಕೇಬಲ್ಗಳಿದ್ದರೆ ಕೂಡಲೆ ತೆರವುಗೊಳಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಹೈ ಟೆನ್ಷನ್ ಲೈನ್ ಕೆಳಗೆ ಅನಧಿಕೃತವಾಗಿ ಕಟ್ಟಡ ಅಥವಾ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಸಂಬಂಧ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಬೆಸ್ಕಾಂನಿಂದ ನೋಟಿಸ್ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. 15 ದಿನಗಳಲ್ಲಿ ಸ್ವಯಂ ತೆರವುಗೊಳಿಸಲು ಸೂಚನೆ ನೀಡಬೆಕು. ತೆರವಾಗದಿದ್ದರೆ ಪೊಲೀಸ್ ಭದ್ರತೆಯೊಂದಿಗೆ ಕಟ್ಟಡ ತೆರವುಗೊಳಿಸಿ ಅದರ ವೆಚ್ಚವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>