ರಾಜ್ಯದ ಇತರ ನಗರಗಳಲ್ಲಿ ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದರೆ ಅದಕ್ಕೆ ದಂಡ ವಿಧಿಸುವ ಅವಕಾಶವಿದೆ. ಆದರೆ, ಬೆಂಗಳೂರಿನಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಂತಹ ಕಟ್ಟಡಗಳ ಬಗ್ಗೆ ಬಿಬಿಎಂಪಿ ಮುಂದಿನ ಕ್ರಮ ತೆಗೆದುಕೊಳ್ಳುವವರೆಗೆ ದುಪ್ಪಟ್ಟು ದಂಡ ಪಾವತಿಸುವುದಕ್ಕೆ ‘ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ಮಸೂದೆ’ ಅವಕಾಶ ನೀಡಲಿದೆ ಎಂದು ಮುಖ್ಯಮಂತ್ರಿಯವರ ಪರವಾಗಿ ಮಸೂದೆ ಮಂಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.