ಈ ಕುರಿತು ಮಾತನಾಡಿದ ವಿದ್ಯಾರ್ಥಿನಿ ಬನಶಂಕರಿ,‘ತಂದೆ ಮಗ್ಗ ನೇಯುವ ಕೆಲಸ ಮಾಡುತ್ತಿದ್ದಾರೆ. ತಾಯಿ ನನ್ನ ಕೆಲಸಕ್ಕೆ ಸಹಾಯ ಮಾಡುತ್ತಿದ್ದು, ಮಾರುಕಟ್ಟೆಯಿಂದ ಹೂವು ತಂದು ಕೊಡುತ್ತಾರೆ.ಜುಲೈ 19ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಮಧ್ಯಾಹ್ನದವರೆಗೆ ಹೂವು ಮಾರಾಟ ಮಾಡಿ, ನಂತರ ಪರೀಕ್ಷೆಗೆ ತಯಾರಾಗುತ್ತಿದ್ದೇನೆ. ಮೊಬೈಲ್ನಲ್ಲಿ ಆನ್ಲೈನ್ ಶಿಕ್ಷಣಕ್ಕೆ ಸಮಸ್ಯೆಯಾಗಿತ್ತು. ಆಯುಕ್ತರು ಲ್ಯಾಪ್ಟಾಪ್ ಕೊಡಿಸುವುದಾಗಿ ತಿಳಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದು ಸಂತಸ ವ್ಯಕ್ತಪಡಿಸಿದಳು.