<p><strong>ಬೆಂಗಳೂರು:</strong> ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ಜ.11 ಮತ್ತು ಜ.12ಕ್ಕೆ ನಗರದ ವಿವಿಧ ವಾರ್ಡ್ಗಳಲ್ಲಿಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪಕ್ಷದ ಬಿಬಿಎಂಪಿ ಚುನಾವಣೆ ಅಭಿಯಾನದ ಉಸ್ತುವಾರಿ ಶಾಂತಲಾ ದಾಮ್ಲೆ ಮಾತನಾಡಿ, ‘ಜ್ಞಾನಭಾರತಿ ವಾರ್ಡ್ಗೆ ಎಸ್.ಸತೀಶ್, ಕಾಡುಗೋಡಿ ವಾರ್ಡ್ಗೆ ಮುನೇಂದ್ರ, ಬಾಪೂಜಿನಗರ ವಾರ್ಡ್ಗೆ ಕೆ.ರಾಜೇಂದ್ರ ಹಾಗೂ ರಾಜಾಜಿನಗರ ವಾರ್ಡ್ಗೆ ಗುರುಮೂರ್ತಿ ಅವರನ್ನು ವಾರ್ಡ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ವಾರ್ಡ್ಗಳಲ್ಲಿ ಸಂಜೆ 6 ಗಂಟೆಗೆ ಜನಸಂವಾದ ಕಾರ್ಯಕ್ರಮಗಳು ಹಾಗೂ ಕಿರುಚಿತ್ರ ಪ್ರದರ್ಶನಗಳು ನಡೆಯಲಿವೆ’ ಎಂದರು.</p>.<p>‘ಸಂವಾದದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳನ್ನು ನಡೆಸಿ, ‘ಹೊಸ ಬೆಂಗಳೂರು’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆಗಳನ್ನೂ ಅನಾವರಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ಜ.11 ಮತ್ತು ಜ.12ಕ್ಕೆ ನಗರದ ವಿವಿಧ ವಾರ್ಡ್ಗಳಲ್ಲಿಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪಕ್ಷದ ಬಿಬಿಎಂಪಿ ಚುನಾವಣೆ ಅಭಿಯಾನದ ಉಸ್ತುವಾರಿ ಶಾಂತಲಾ ದಾಮ್ಲೆ ಮಾತನಾಡಿ, ‘ಜ್ಞಾನಭಾರತಿ ವಾರ್ಡ್ಗೆ ಎಸ್.ಸತೀಶ್, ಕಾಡುಗೋಡಿ ವಾರ್ಡ್ಗೆ ಮುನೇಂದ್ರ, ಬಾಪೂಜಿನಗರ ವಾರ್ಡ್ಗೆ ಕೆ.ರಾಜೇಂದ್ರ ಹಾಗೂ ರಾಜಾಜಿನಗರ ವಾರ್ಡ್ಗೆ ಗುರುಮೂರ್ತಿ ಅವರನ್ನು ವಾರ್ಡ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ವಾರ್ಡ್ಗಳಲ್ಲಿ ಸಂಜೆ 6 ಗಂಟೆಗೆ ಜನಸಂವಾದ ಕಾರ್ಯಕ್ರಮಗಳು ಹಾಗೂ ಕಿರುಚಿತ್ರ ಪ್ರದರ್ಶನಗಳು ನಡೆಯಲಿವೆ’ ಎಂದರು.</p>.<p>‘ಸಂವಾದದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳನ್ನು ನಡೆಸಿ, ‘ಹೊಸ ಬೆಂಗಳೂರು’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆಗಳನ್ನೂ ಅನಾವರಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>