‘ವಿಜಯನಗರದ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂವಾದ ನಡೆಯಲಿದೆ. ನಗರದಲ್ಲಿ ಜನರು ಪ್ರತಿದಿನ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳು, ಸಮಸ್ಯೆಗಳ ನಿವಾರಣೆಗೆ ಪಕ್ಷದಿಂದ ರೂಪಿಸಿರುವ ಪರಿಹಾರ ಕ್ರಮಗಳು, ಅಭ್ಯರ್ಥಿಗಳು ಚುನಾವಣೆಯನ್ನು ಎದುರಿಸಲು ಅನುಸರಿಸಬೇಕಾದ ವಿಧಾನಗಳು ಮೊದಲಾದವುಗಳ ಬಗ್ಗೆ ಪಕ್ಷದ ಮುಖಂಡರು ಆಕಾಂಕ್ಷಿಗಳಿಗೆ ತಿಳಿಸಿಕೊಡಲಿದ್ದಾರೆ. ಇದೇ ವೇಳೆ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಲಾಗುವುದು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿಪಕ್ಷದ ಸಂಚಾಲಕಿ ಶಾಂತಲಾ ದಾಮ್ಲೆ ತಿಳಿಸಿದರು.